Friday, March 29, 2024
spot_img
More

    Latest Posts

    ತುಳುನಾಡ ರಕ್ಷಣಾ ವೇದಿಕೆ ಮಂಗಳೂರು ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಗೀತ ಶೆಟ್ಟಿ ಪಡೀಲ್‌ ನೇಮಕ

    ಮಂಗಳೂರು: ತುಳುನಾಡ ರಕ್ಷಣಾ ವೇದಿಕೆಯ ಕೇಂದ್ರೀಯ ಕಛೇರಿಯಲ್ಲಿ ಇಂದು ಮಂಗಳೂರು ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿಯನ್ನಾಗಿ ಹಲವಾರು ವರ್ಷಗಳಿಂದ ಮಹಿಳಾ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಸಮಾಜ ಸೇವೆ ಸಲ್ಲಿಸುತ್ತಿರುವ ಗೀತ ಶೆಟ್ಟಿ ಪಡೀಲ್‌ ರವರನ್ನು ತು.ರ.ವೇ ಸ್ಥಾಪಕಾಧ್ಯಕ್ಷರಾದ ಯೋಗೀಶ್ ಶೆಟ್ಟಿ ಜಪ್ಪು ರವರು ನೇಮಕ ಮಾಡಿದರು.
    ಯೋಗೀಶ್ ಶೆಟ್ಟಿ ಜಪ್ಪು ರವರು ಮಾತನಾಡಿ ಸಂಘಟನೆಯು ಕಳೆದ 13 ವರ್ಷಗಳಿಂದ ನಿರಂತರವಾಗಿ ತುಳುನಾಡಿನ ಜನರ ಸಮಸ್ಯೆಗಳಿಗೆ ಸ್ಪಂಧಿಸುತ್ತಾ ತುಳುವರ ಪ್ರೀತಿಗೆ ಪಾತ್ರವಾಗಿದೆ.
    ಧರ್ಮ ಜಾತಿ ಭೇದವಿಲ್ಲದೆ ತುಳುವರು ನಮ್ಮ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದು, ಮಾನವೀಯತೆಯೆ ಪರಮಧರ್ಮ ಎಂಬ ಸಂದೇಶವನ್ನು ಸಾರುತ್ತಿದ್ದಾರೆ. ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿಸುತ್ತಿರುವ ಪರಿಣಾಮ ಇಂದು ಸಂಘಟನೆಯು ಬಲಿಷ್ಟವಾಗಿ ಬೆಳೆಯುತ್ತಿದೆ ಎಂದು ಹೇಳಿದರು.

    ಮಂಗಳೂರು ತು.ರ.ವೇ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಗೀತ ಶೆಟ್ಟಿ ಪಡೀಲ್‌ ಮಾತನಾಡುತ್ತಾ ಯೋಗೀಶ್ ಶೆಟ್ಟಿಯವರು ನನ್ನ ಕಾರ್ಯವನ್ನು ಗುರುತಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಿದ ಬಗ್ಗೆ ಅಭಿನಂದನೆ ಸಲ್ಲಿಸಿದರು ಹಾಗೂ ತು.ರ.ವೇ ಯ ಕಾರ್ಯ ಚಟುವಟಿಕೆಯ ಬಗ್ಗೆ ಮೆಚ್ಚುಗೆ ಸೂಚಿಸಿ ಯೋಗೀಶ್ ಶೆಟ್ಟಿ ಜಪ್ಪು ರವರು ಎಲ್ಲಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನು ಉತ್ತೇಜಿಸುತ್ತಾ ಒಗ್ಗಟ್ಟಿನಲ್ಲಿ ಬಲವಿದೆ ಎಂಬ ವೇದವಾಕ್ಯದೊಂದಿಗೆ ಸಂಘಟನೆಯನ್ನು ಬಲಿಷ್ಟಗೊಳಿಸುತ್ತಿದ್ದಾರೆ ಎಂದರು.

    ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ಜೆ.ಇಬ್ರಾಹಿಂ,ಜ್ಯೋತಿಕಾ ಜೈನ್,ಕ್ಲೀಟಸ್ ಲೋಬೋ, ಮುನೀರ್ ಮುಕ್ಕಚ್ಚೇರಿ, ಆಶಾ ಶೆಟ್ಟಿ ಅತ್ತಾವರ ಮುಂತಾದವರು ಉಪಸ್ಥಿತರಿದ್ದರು.
    ಪ್ರಶಾಂತ್ ಭಟ್ ಕಡಬ ಕಾರ್ಯಕ್ರಮ ನಿರ್ವಹಿಸಿದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss