ಸುಳ್ಯ: ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ತಾಲೂಕಿನ ಅರಂತೋಡು ಎಂಬಲ್ಲಿ ನಡೆದಿದೆ.
ಅರಂತೋಡು ಪೇಟೆಯಲ್ಲಿ ಹೊಟೇಲ್ ನಡೆಸುತ್ತಿದ್ದ ಯೋಗೀಶ್ ಎಂಬುವವರ ಪುತ್ರಿ ಖುಷಿ (8) ಮೃತಪಟ್ಟ ದುರ್ದೈವಿ.ಆಕೆ ಕ್ಯಾನ್ಸರ್ ಮತ್ತು ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದಳು .ಖುಷಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ಓದುತ್ತಿದ್ದಳು. ತಂದೆ, ತಾಯಿಯನ್ನು ಅಗಲಿದ್ದಾರೆ.