ಉಡುಪಿ:ಚೈತ್ರ ಕುಂದಾಪುರ ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ವಂಚಿಸಿ ಜೈಲಿಗೆ ಹೋಗಿದ್ದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕೋಟಿ ವಂಚನೆ ಕೇಸ್ ಬಯಲಿಗೆ ಬಂದಿದೆ.
ಬಿಜೆಪಿಯಲ್ಲಿ ಟಿಕೆಟ್ ಕೊಡಿಸುವುದಾಗಿ ಪುತ್ತೂರು ಮೂಲದ ಮುಖಂಡನ ವಿರುದ್ದ ದೂರು ದಾಖಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೆಸರು ಹೇಳಿಕೊಂಡು ಟಿಕೆಟ್ ಕೊಡಿಸೋದಾಗಿ ವಂಚನೆ ಮಾಡಿದ್ದಾರೆ. ವಿಜಯಪುರದ ರೇವಣ್ಣ ಸಿದ್ದಪ್ಪ, ಪುತ್ತೂರಿನ ಶೇಖರ್ ಎನ್.ಪಿ ವಿರುದ್ಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.