Thursday, March 28, 2024
spot_img
More

    Latest Posts

    ವಿಟ್ಲ: ಕುಡಿತದ ಚಟ ಹೊಂದಿದ್ದ ವ್ಯಕ್ತಿ ಆತ್ಮಹತ್ಯೆ

    ವಿಟ್ಲ: ವಿಪರೀತ ಕುಡಿತದ ಚಟ ಹೊಂದಿದ್ದ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಅಳಿಕೆ ಎಂಬಲ್ಲಿ ನಡೆದಿದೆ. ಅಳಿಕೆ ಗ್ರಾಮದ ಪಡಿಬಾಗಿಲು ನಿವಾಸಿ ಬಾಲು ಪೂಜಾರಿ ( 60) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

    ಈತ ವಿಪರೀತ ಕುಡಿತದ ಚಟ ಹೊಂದಿದ್ದ ಎನ್ನಲಾಗಿದ್ದು, ಮನೆಯ ಸಮೀಪದ ಗುಡ್ಡದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ‌. ಈ ಹಿಂದೆಯೂ ಆತ್ಮಹತ್ಯೆಗೆ ಪ್ರಯತ್ನಿಸಿ ಬದುಕಿ ಉಳಿದ್ದಿದ್ದ ಎನ್ನಲಾಗಿದೆ. ಮೂರು ವರ್ಷದ ಹಿಂದೆ ಈತ ವಿಷ ಪದಾರ್ಥ ಪೆರಢಾನ್ ಸೇವಿಸಿ ವೆನ್ ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಂದಿದ್ದ ಎನ್ನಲಾಗಿದೆ. ವಿವಾಹಿತನಾಗಿದ್ದು, ಈತನಿಗೆ 4 ಹೆಣ್ಣು ಹಾಗೂ ಮೂರು ಗಂಡು ಮಕ್ಕಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss