Friday, March 29, 2024
spot_img
More

    Latest Posts

    ಉಳಾಯಿಬೆಟ್ಟು ಬಾಲಕಿಯ ಕೊಲೆ ಪ್ರಕರಣ: ಆರೋಪಿಗಳನ್ನು ಗಲ್ಲಿಗೇರಿಸಲು ತು.ರ.ವೇ ಆಗ್ರಹ

    ಮಂಗಳೂರು: ಉಳಾಯಿಬೆಟ್ಟು ಸಮೀಪದ ಪರಾರಿ ಎಂಬಲ್ಲಿನ ಟೈಲ್ಸ್ ಫ್ಯಾಕ್ಟರಿಯ ಆವರಣದಲ್ಲಿ ರವಿವಾರ ನಡೆದ 8 ವರ್ಷದ ಬಾಲಕಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.
    ಆರೋಪಿಗಳು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕತ್ತು ಹಿಸುಕಿ ಕೊಲೆಗೈದಿದ್ದು, ತುಳುನಾಡಿನಲ್ಲಿ ಇಂತಹ ಮುಗ್ದ ಮಗುವಿನ ಮೇಲೆ ಹೇಯ ಕೃತ್ಯ ಎಸಗಿದ ಆರೋಪಿಗಳನ್ನು ಗಲ್ಲಿಗೇರಿಸಬೇಕು ಎಂದು ತುಳುನಾಡ ರಕ್ಷಣಾ ವೇದಿಕೆ ಆಗ್ರಹಿಸಿದೆ.
    ಈ ಬಗ್ಗೆ ಮಾತನಾಡಿದ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಾಕಾಧ್ಯಕ್ಷ ಯೋಗಿಶ್‌ ಶೆಟ್ಟಿ ಜೆಪ್ಪು, ಕರಾವಳಿಯಲ್ಲಿ ಇಂತಹ ಒಂದು ಘಟನೆ ನಡೆದಿದ್ದು ನಿಜಕ್ಕೂ ಬೇಸರದ ಸಂಗತಿಯಾಗಿದೆ.
    ಇಂತಹ ಅಮಾನವೀಯ ಕೃತ್ಯ ಎಸಗಿದ ನಾಲ್ವರು ಆರೋಪಿಗಳಿಗೆ ಶೀಘ್ರವೇ ಕಠಿಣ ಶಿಕ್ಷೆ ವಿಧಿಸಬೇಕಾಗಿದೆ.ಏನೂ ಅರಿಯದ 8 ವರ್ಷದ ಪುಟ್ಟ ಬಾಲಕಿಯನ್ನು ಈ ರೀತಿಯಾಗಿ ಕೊಲೆ ಮಾಡಿದ್ದು, ಅದೇ ರೀತಿ ಆರೋಪಿಗಳನ್ನು ಗಲ್ಲಿಗೇರಿಸಬೇಕು.ಕರಾವಳಿಯಲ್ಲಿ ಮತ್ತೆ ಇಂತಹ ಘಟನೆ ಮರುಕಳಿಸದೇ ಇರಲಿ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss