ಮಂಗಳೂರು: ಮಳೆಯ ಅಭಾವದಿಂದ ಕಂಗೆಟ್ಟಿದ್ದ ಜನರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡು ವ್ಯಾಪ್ತಿಯ ಅಲ್ಲಲ್ಲಿ ಶನಿವಾರ, ಭಾನುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆಯು ಅಲ್ಲಲ್ಲಿ ರಭಸದಿಂದ ಸುರಿಯುವ ಸಾಧ್ಯತೆಯಿದೆ ಎಂದು ಐಎಂಡಿ ಸೂಚನೆ ನೀಡಿದೆ. ಇಂದು ಸಂಜೆ ಮಂಗಳೂರಿನ ನಗರದ ಹಲವು ಕಡೆಗಳಲ್ಲಿ ಮಳೆಯಾಗಿದೆ.ಕಳೆದ ಕೆಲವು ದಿನಗಳಿಂದ ಬಿಡುವು ನೀಡಿದ್ದ ಮಳೆಯು ಅಲ್ಲಲ್ಲಿ ರಭಸದಿಂದ ಸುರಿಯುವ ಸಾಧ್ಯತೆಯಿದೆ ಎಂದು ಐಎಂಡಿ ಸೂಚನೆ ನೀಡಿದೆ. ಇಂದು ಮಂಗಳೂರಿನ ನಗರದ ಹಲವು ಕಡೆಗಳಲ್ಲಿ ಮಳೆಯಾಗಿದೆ.