ಮಂಗಳೂರಿನ ಯೆಯ್ಯಾಡಿ ಶರ್ಬತ್ಕಟ್ಟೆಯಲ್ಲಿರುವ ಶ್ರೀವೇದಂ ಆಯು ಮಲ್ಟಿ ಸ್ಪೆಷಾಲಿಟಿ ಆಯುರ್ವೇದ ಆಸ್ಪತ್ರೆಯಲ್ಲಿ ಧನ್ವಂತರಿ ಜಯಂತಿಯ ಪ್ರಯುಕ್ತ ಉಚಿತ ಆಯುರ್ವೇದ ಆರೋಗ್ಯ ತಪಾಸಣೆ ಶಿಬಿರ ನ. 10, 11ರಂದು ಬೆಳಗ್ಗೆ 9ರಿಂದ ಮಧ್ಯಾಹ್ನ 1.30ರ ವರೆಗೆ ಹಾಗೂ 3ರಿಂದ 8 ಗಂಟೆಯ ವರೆಗೆ ನಡೆಯಲಿದೆ.
ಶಿಬಿರದಲ್ಲಿ ರಕ್ತದೊತ್ತಡ ಪರೀಕ್ಷೆ , ರಕ್ತದ ಸಕ್ಕರೆ ಪರೀಕ್ಷೆ , ನಾಡಿ ಪರೀಕ್ಷೆ, ಔಷಧಗಳಿಗೆ ಶೇ.5 ರಿಯಾಯಿತಿ, ಎಲ್ಲ ರೀತಿಯ ಚಿಕಿತ್ಸೆಗೆ ಶೇ.5 ರಿಯಾಯಿತಿ ಹಾಗೂ ಉಚಿತ ಬಿಎಂಡಿ ಟೆಸ್ಟ್ ಮಾಡಲಾಗುವುದು ಎಂದು ಶ್ರೀ ವೇದಂ ಆಯು ಮಲ್ಟಿ ಸ್ಪೆಷಾಲಿಟಿ ಆಯುರ್ವೇದ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ| ಕೇಶವ ರಾಜ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.