ಮಂಗಳೂರು: ಕರಾವಳಿ ಸಂಚಾರಿ ಹೈಕೋರ್ಟ್ ಪೀಠ ಹೋರಾಟ ಸಮಿತಿ ಮತ್ತು ಎಸ್ ಡಿ ಎಮ್ ಕಾನೂನು ಕಾಲೇಜಿನ ಜಂಟಿ ನೇತೃತ್ವದಲ್ಲಿ ಪೀಠ ಸ್ಥಾಪನೆಯ ಬೇಡಿಕೆಯನ್ನು ಈಡೇರಿಸಲು ಇಂದು ವಿದ್ಯಾರ್ಥಿಗಳ ಇ-ಮೇಲ್ ಚಳುವಳಿ ನಡೆಸಲಾಯಿತು. ವಿದ್ಯಾರ್ಥಿಗಳು ಇ-ಮೇಲ್ ಮೂಲಕ ರಾಜ್ಯಪಾಲರು, ಮುಖ್ಯಮಂತ್ರಿಗಳು ಮತ್ತು ಮುಖ್ಯ ನ್ಯಾಯಾಧೀಶರಿಗೆ ಈ- ಮೇಲ್ ಕಳುಹಿಸಿದರು. ಅಭಿಯಾನಕ್ಕೆ ಹೋರಾಟ ಸಮಿತಿಯ ಸಂಚಾಲಕರಾದ mlc ಶ್ರೀಮಾನ್ ಐವನ್ ಡಿಸೋಜ ಚಾಲನೆ ನೀಡಿ ಹೋರಾಟದ ಬಗ್ಗೆ ಸವಿಸ್ತಾರವಾಗಿ ಮಾತನಾಡಿದರು.

ಅಭಿಯಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ಹೋರಾಟ ಸಮಿತಿಯ ಅಧ್ಯಕ್ಷರಾದ ಶ್ರೀ ಎಚ್ ವಿ ರಾಘವೇಂದ್ರ, ಹಿರಿಯ ವಕೀಲರಾದ ಶ್ರೀಮತಿ ಆಶಾ ನಾಯಕ್, ಶ್ರೀ ನರಸಿಂಹ ಹೆಗ್ಡೆ, ಡಾ. ದೇವರಾಜ್ ಕೆ , ಶ್ರೀ ದಿನಕರ್ ಶೆಟ್ಟಿ, ಶ್ರೀ ಗಿರೀಶ್ ಶೆಟ್ಟಿ, ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಬಾಳಿಕಾ, ಹೆಚ್ಓಡಿ ಆದ ಸಾರಿಕಾ ಹರೀಶ್ ಕುಮಾರ್, ತುಳುನಾಡ ರಕ್ಷಣಾ ವೇದಿಕೆಯ ಕೇಂದ್ರೀಯ ಮಂಡಳಿ ಅಧ್ಯಕ್ಷ ಶ್ರೀ ಯೋಗೇಶ್ ಶೆಟ್ಟಿ ಜಪ್ಪು, ವಿದ್ಯಾರ್ಥಿ ನಾಯಕ ಸತ್ಯಾತ್ಮ ಭಟ್ ಮೊದಲಾದವರು ಉಪಸ್ಥಿತರಿದ್ದರು.


