ಬಂಟ್ವಾಳ: ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಬಿ.ಸಿ.ರೋಡಿನ ತಲಪಾಡಿ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೇರಳದ ಕೂಲಿ ಕಾರ್ಮಿಕ ಮಹಿಳೆ ರಾಜಮ್ಮ (60) ಅವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ತೀವ್ರ ಗಾಯಗೊಂಡ ಅವರು ಮೃತಪಟ್ಟರು.
ಗುರುವಾರ ಘಟನೆ ನಡೆದಿದ್ದು, ಕೂಡಲೇ ಮಹಿಳೆಯನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.