ಮಂಗಳೂರು : ಯುದ್ಧಪೀಡಿತ ಇಸ್ರೇಲ್ ನಲ್ಲಿರುವ ದ.ಕ.ಜಿಲ್ಲೆಯ ಮಂದಿಯ ಬಗ್ಗೆ ಮಾಹಿತಿಯಿದ್ದಲ್ಲಿ ಕಂಟ್ರೋಲ್ ರೂಂ ಅನ್ನು ಸಂಪರ್ಕಿಸಿ ಎಂದು ದ.ಕ.ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇಸ್ರೇಲ್ ದೇಶದ ಪ್ರಸ್ತುತ ಪರಿಸ್ಥಿತಿ ಉಲ್ಬಣಗೊಂಡಿದೆ. ಆದ್ದರಿಂದ ಅಲ್ಲಿಗೆ ವ್ಯಾಪಾರ, ಶಿಕ್ಷಣ, ಉದ್ಯೋಗ ಹಾಗೂ ಇನ್ನಿತರ ಉದ್ದೇಶಗಳಿಗೆ ಹೋಗಿರುವ ಅಥವಾ ವಾಸವಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಪಟ್ಟ ಭಾರತದ ಪ್ರಜೆಗಳಿದ್ದಲ್ಲಿ ಅವರ ಬಗ್ಗೆ ಮಾಹಿತಿ ನೀಡಬಹುದು. ಅದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ತೆರೆದಿರುವ ಕಂಟ್ರೋಲ್ ರೂಂ. ಸಂಖ್ಯೆ: 1077/ 0824-2442590 ಗೆ ಕರೆ ಮಾಡಿ ಕೂಡಲೇ ನೀಡುವಂತೆ ಕೋರಲಾಗಿದೆ ಅಥವಾ ರಾಜ್ಯ ಸರಕಾರದ ತುರ್ತು ಸಂಖ್ಯೆ 080-22340676, 080-22253707 ಮಾಹಿತಿ ನೀಡುವಂತೆ ತಿಳಿಸಿದೆ.
