ಮಂಗಳೂರು: ಮನಪಾ ಬೋಳೂರು ವಾರ್ಡ್ ಕಾರ್ಪೊರೇಟರ್ ಜಗದೀಶ್ ಶೆಟ್ಟಿಯವರು ಇಂದು ಸಂಜೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಗರದ ಡಿಸಿ ಆಫೀಸ್ ಬಳಿಯ ತಾಜ್ ಮಂಜೂರಾನ್ ಹೊಟೇಲ್ ಬಳಿಯಲ್ಲಿ ಕಾರಿನಲ್ಲಿಯೇ ಕುಳಿತು ಅವರು ವಿಷ ಸೇವನೆ ಮಾಡಿದ್ದಾರೆ. ವೀಳ್ಯದೆಲೆಗೆ ಸ್ಪ್ರೇ ಮಾಡುವ ರಾಸಾಯನಿಕವನ್ನು ಎರಡು ಸ್ಪೂನ್ ನಷ್ಟು ಸೇವನೆ ಮಾಡಿದ್ದರು ಎಂದು ತಿಳಿದು ಬಂದಿದೆ.. ಜಗದೀಶ್ ಶೆಟ್ಟಿಯವರು ವಿಷ ಸೇವಿಸಿ ಅಸ್ವಸ್ಥರಾಗಿದ್ದನ್ನು ನೋಡಿ ತಕ್ಷಣ ಅಲ್ಲಿದ್ದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ದಾಖಲಾದ ಸಂದರ್ಭ ಅವರು ಪರಿಸ್ಥಿತಿ ಗಂಭೀರವಾಗಿತ್ತು. ಆದರೆ ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಆದರೆ ಸದ್ಯ ಅವರನ್ನು ಐಸಿಯುನಲ್ಲಿರಿಸಿ ಪರಿಶೀಲನೆ ಮಾಡಲಾಗುತ್ತಿದೆ.
Trending
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
- ಪುತ್ತೂರಿನ ಸಾನ್ವಿತಾ ಎಂ. ರೈ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆ
- ಗ್ರೀನ್ ವ್ಯೂ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
- ಮಂಗಳೂರಿನ ಸಿಟಿ ಸೆಂಟರ್ KFC ಮಳಿಗೆಯಲ್ಲಿ 9 ತಿಂಗಳ ಹಿಂದಿನ ಮಾಂಸ ಪತ್ತೆ: ಆರೋಗ್ಯಾಧಿಕಾರಿಗಳಿಂದ ಮಳಿಗೆಗೆ ಬೀಗ
- ತಲ್ಲೂರಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಸಿಹಿ ವಿತರಣೆ, ಶೇ.90 ಅಂಕ ಗಳಿಸಿದ ಸ್ಪಂದಿತ ಪೂಜಾರಿಗೆ ಡಾ. ರವೀಂದ್ರ ತಲ್ಲೂರು ಅವರಿಂದ ಸನ್ಮಾನ
- ಡಿ.ಕೆ. ಯೂಸ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ನ ನೂತನ ಕಾನೂನು ಸಲಹೆಗಾರರಾಗಿ ಶ್ರೀ ಸಿನಾನ್ ಸಿದ್ದೀಕ್ ನೇಮಕ
