ಮಂಗಳೂರು: ಮನಪಾ ಬೋಳೂರು ವಾರ್ಡ್ ಕಾರ್ಪೊರೇಟರ್ ಜಗದೀಶ್ ಶೆಟ್ಟಿಯವರು ಇಂದು ಸಂಜೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಗರದ ಡಿಸಿ ಆಫೀಸ್ ಬಳಿಯ ತಾಜ್ ಮಂಜೂರಾನ್ ಹೊಟೇಲ್ ಬಳಿಯಲ್ಲಿ ಕಾರಿನಲ್ಲಿಯೇ ಕುಳಿತು ಅವರು ವಿಷ ಸೇವನೆ ಮಾಡಿದ್ದಾರೆ. ವೀಳ್ಯದೆಲೆಗೆ ಸ್ಪ್ರೇ ಮಾಡುವ ರಾಸಾಯನಿಕವನ್ನು ಎರಡು ಸ್ಪೂನ್ ನಷ್ಟು ಸೇವನೆ ಮಾಡಿದ್ದರು ಎಂದು ತಿಳಿದು ಬಂದಿದೆ.. ಜಗದೀಶ್ ಶೆಟ್ಟಿಯವರು ವಿಷ ಸೇವಿಸಿ ಅಸ್ವಸ್ಥರಾಗಿದ್ದನ್ನು ನೋಡಿ ತಕ್ಷಣ ಅಲ್ಲಿದ್ದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಗೆ ದಾಖಲಾದ ಸಂದರ್ಭ ಅವರು ಪರಿಸ್ಥಿತಿ ಗಂಭೀರವಾಗಿತ್ತು. ಆದರೆ ಸದ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ವೈದ್ಯರು ತಿಳಿಸಿದ್ದಾರೆ. ಆದರೆ ಸದ್ಯ ಅವರನ್ನು ಐಸಿಯುನಲ್ಲಿರಿಸಿ ಪರಿಶೀಲನೆ ಮಾಡಲಾಗುತ್ತಿದೆ.
Trending
- ಅಮ್ಮುಂಜೆ ಸೆೇಕ್ರೆಡ್ ಹಾರ್ಟ್ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ತುಳುನಾಡ ರಕ್ಷಣಾ ವೇದಿಕೆಯ ಆಗ್ರಹ
- ಸೂಡ ಮೇಳದ ದಶಮ ಸಂಭ್ರಮ – ಯಕ್ಷಗಾನ ಸಪ್ತಾಹ
- ಭೀಕರ ಅಗ್ನಿ ದುರಂತದಲ್ಲಿ 23 ಮಂದಿ ಸಜೀವ ದಹನ
- ಚಿಕ್ಕಮಗಳೂರು : ದತ್ತ ಜಯಂತಿ ಬ್ಯಾನರ್ ಉದ್ವಿಗ್ನತೆ – ಕಡೂರಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ಸಿನ ಕಾರ್ಯಕರ್ತ ಕೊಲೆ
- ಹಾವಂಜೆ ಗ್ರಾಮದ ತ್ರಿವರ್ಣ ವಿಶ್ವವೇದಿಕೆ (ರಿ.), ಕೀಳಂಜೆ ಇದರ 12ನೇ ವಾರ್ಷಿಕೋತ್ಸವ ಸಮಾರಂಭ
- ಜಗದ್ಗುರು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ – ಐದು ದಿನಗಳ ಬಿಹಾರ್–ಜಾರ್ಖಂಡ್ ತೀರ್ಥಯಾತ್ರೆ
- ಡಿಸೆಂಬರ್ 5 ರಂದು ಬೆಳಿಗ್ಗೆ 8.55ಕ್ಕೆ ಶಿಲಾನ್ಯಾಸ ಕಾರ್ಯಕ್ರಮ
- ಯಕ್ಷಗಾನ ತಾಳಮದ್ದಳೆ ಸಪ್ತಾಹ ಸಮಾರೋಪ – ಯಕ್ಷಾಂಗಣ ಪ್ರಶಸ್ತಿ ಪ್ರದಾನ
