Friday, April 26, 2024
spot_img
More

    Latest Posts

    ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

    ಪುಂಜಾಲಕಟ್ಟೆ: ಭೂ ಕೈಲಾಸ ಪ್ರತೀತಿಯ ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಮೇಲ್ಭಾಗದಿಂದ ಬೃಹತ್ ಬಂಡೆಕಲ್ಲೊಂದು ಉರುಳಿ ಬಿದ್ದ ಘಟನೆ ಮಂಗಳವಾರ ಸಂಭವಿಸಿದೆ.
    ಬಂಡೆಕಲ್ಲು ಉರುಳಿ ಬಿದ್ದ ರಭಸಕ್ಕೆ ಮರಗಳು ಮುರಿದು ಬಿದ್ದಿದ್ದು,ದೇವಸ್ಥಾನ ದ ರಥಬೀದಿಯಿಂದ ಕಾರಿಂಜಬೈಲ್ ಸಂಪರ್ಕಿಸುವ ರಸ್ತೆಗೆ ಬಂಡೆಕಲ್ಲು, ಮರ ಬಿದ್ದು ರಸ್ತೆ ತಡೆಯುಂಟಾಗಿತ್ತು.


    ಅರಣ್ಯ ಇಲಾಖೆಯ ಸಿಬಂದಿಗಳು ಹಾಗೂ ಗ್ರಾಮಸ್ಥರ ನೆರವಿನಿಂದ ರಸ್ತೆಯಲ್ಲಿದ್ದ ಮರಗಳನ್ನು ತೆರವು ಮಾಡಲಾಗಿದೆ.
    ಇದೇ ಸಂದರ್ಭದಲ್ಲಿ ಗುಡ್ಡದಲ್ಲಿರುವ ಕೆಲವು ಮರಗಳಿಗೆ ಹಾನಿಯಾಗಿದೆ.
    ಬೆಳಗ್ಗೆ ಸುಮಾರು 9 ಗಂಟೆಯ ಬಳಿಕ ಕಾರಿಂಜೇಶ್ವರನ ಸನ್ನಿಧಿಯ ಬಲ ಭಾಗದಲ್ಲಿದ್ದ ಬೃಹತ್ ಬಂಡೆ ಕಲ್ಲು ಕೆಳಗೆ ಉರುಳಿ ಕೊಂಡು ಬಂದು ರಸ್ತೆಯ ಬದಿಯಲ್ಲಿ ಸಿಲುಕಿಕೊಂಡು ನಿಂತಿದೆ.
    ಕಾರಿಂಜೇಶ್ವರನ ಸನ್ನಿಧಿ ಯ ಎಡಭಾಗದಲ್ಲಿತಡೆಗೋಡೆ ಕುಸಿದುಬಿದ್ದಿತ್ತು.
    ಕಾರಿಂಜ ದೇವಸ್ಥಾನದ ಪರಿಸರದಲ್ಲಿ ನಡೆಸುತ್ತಿದ್ದ ಗಣಿಗಾರಿಕೆ ಪರಿಣಾಮವಾಗಿ ಇಲ್ಲಿ ಕುಸಿತವಾಗಿದೆ ಎಂದು ಆರೋಪಿಸಿ ಹಿಂದೂ ಜಾಗರಣ ವೇದಿಕೆ ನಡೆಸಿದ ಹೋರಾಟದಿಂದ ಗಣಿಗಾರಿಕೆ ಸ್ಥಗಿತಗೊಂಡಿದೆ. ಇದೀಗ ಮತ್ತೆ ಬಂಡೆ ಕಲ್ಲು ಕುಸಿದಿದುದರಿಂದ ಗ್ರಾಮಸ್ಥರು ಕಾರಿಂಜೇಶ್ವರ ದೇವಸ್ಥಾನಕ್ಕೆ ಧಕ್ಕೆಯಾಗುವ ಆತಂಕದಲ್ಲಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss