ಕಾರ್ಕಳ: ಕಾರ್ಕಳ ಎಪಿಎಂಸಿ ಅಧ್ಯಕ್ಷ ಮೋಹನ ದಾಸ್ ಶೆಟ್ಟಿ (65) ಕೋವಿಡ್ ನಿಂದಾಗಿ ಸಾವನ್ನಪ್ಪಿದ್ದಾರೆ.ಕಾರ್ಕಳ ತಾಲೂಕಿನ ಬೆಳ್ಮಣ್ ನಿವಾಸಿಯಾಗಿದ್ದ ಮೋಹನ್ ದಾಸ್ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.
ಬೆಳ್ಮಣ್ ರೋಟರಿಯ ಸಕ್ರಿಯ ಸದಸ್ಯರಾಗಿದ್ದ ಅವರು, ಬಿಜೆಪಿ ಬೆಳ್ಮಣ್ ಘಟಕದ ಮಾಜಿ ಸ್ಥಾನೀಯ ಸಮಿತಿ ಅಧ್ಯಕ್ಷರಾಗಿದ್ದರು. ಅವರು ಪತ್ನಿ ಮತ್ತು ಪುತ್ರಿಯನ್ನು ಅಗಲಿದ್ದಾರೆ.