ದಿನಾಂಕ ಜೂನ್ 18-2025ರಂದು ಪ್ರವೀಣ ಎಂಬ 29 ವರ್ಷ ಪ್ರಾಯದ ಯುವಕನಿಗೆ ಬೆಳಿಗ್ಗೆ ಏಳು ಗಂಟೆಯಿಂದ ಫ್ಯಾಕ್ಟರಿಗೆ ಹೋದಾಗ ಅಲ್ಲಿನ
ಹೆಚ್ ಎ ಆರ್ ಚಂದ್ರಶೇಖರ್ ಎಂಬವರು ಪ್ರವೀಣನನ್ನು ಗೇಟಿನ ಒಳಗೆ ಬಾರದಂತೆ ತಡೆದು ಏರುದನಿಯಿಂದ ಬೆದರಿಸಿ ಬೈಕ್ ಅನ್ನು ತಡೆದು ನಿಲ್ಲಿಸಿ ಫ್ಯಾಕ್ಟರಿ ಮಾಲೀಕ ಸಂಪತ್ ಶೆಟ್ಟಿ ಬರುವವರೆಗೆ ನಿನ್ನನ್ನು ಒಳಗೆ ಬಿಡಬಾರದು ಎಂದು ಹೇಳಿದ್ದಾರೆ ಎಂದು ಗದರಿಸಿ ಅವನ ಬೈಕ್ ಮತ್ತು ಬೈಕ್ ಕೀಯನ್ನು ಕಸಿದುಕೊಂಡು ನಂತರ ಬೆಳಿಗ್ಗೆ 9.30 ಗಂಟೆಗೆ ಮಾಲೀಕರಾದ ಸಂಪತ್ ಶೆಟ್ಟಿ ರವರು ಬಂದು ಆತನನ್ನು ಉದ್ದೇಶಿಸಿ ಬೋಳಿ ಮಗನೆ ನಿನಗೆ ಬೂಟ್ ಕಾಲಲ್ಲಿ ಒದೆಯುತ್ತೇನೆ ಎಂದು ಬೆದರಿಸಿ 9 30 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಒಂಟಿಕಾಲಲ್ಲಿ ನಿಲ್ಲು ಇಲ್ಲ ಅಂದ್ರೆ ನಿನ್ನ ಜೀವ ಸಹಿತ ಬಿಡುವುದಿಲ್ಲ ಎಂದು ನಿಲ್ಲಿಸಿ ಅಮಾನವೀಯ ಕೃತ್ಯವನ್ನು ಈ ಕೃಷ್ಣಪ್ರಸಾದ್ ಕ್ಯಾಶ್ ಇಂಡಸ್ಟ್ರಿಯ ಮಾಲಿಕ ಸಂಪತ್ ಶೆಟ್ಟಿ, ಮತ್ತು ಚಂದ್ರಶೇಖರ್ ಎಸಗಿರುವ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ( ಬಿಎನ್ಎಸ್)
2023 ಯುಎಸ್ 126. (2)352,351,(2)3,(5) ರಂತೆ ಪ್ರಕರಣದಾಲಾಗಿದೆ ಈ ಕೃಷ್ಣಪ್ರಸಾದ್ ಕ್ಯಾಶೂಇಂಡಸ್ಟ್ರೀಸ್ ಮಾಲಿಕ ಸಂಪತ್ ಶೆಟ್ಟಿ ಯನ್ನು ಮತ್ತು ಚಂದ್ರಶೇಖರ್ ರನ್ನು ಈ ಕೂಡಲೇ ಬಂಧಿಸುವಂತೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರರವರು ಒತ್ತಾಯ ಹಾಗೂ ಈ ಅಮಾನವೀಯ ಕೃತ್ಯ ಎಸಗಿದ ಈ ಕಾರ್ಖಾನೆಯನ್ನು ಸರಕಾರ ಕೂಡಲೇ ಮುಟ್ಟುಗೋಲು. ಹಾಕಿಕೊಳ್ಳಬೇಕು ಮತ್ತು ಇದುವರೆಗೆ ಈ ಒಂದು ಫ್ಯಾಕ್ಟರಿಯಲ್ಲಿ ದೌರ್ಜನ್ಯಕ್ಕೊಳಗಾದ ಎಲ್ಲಾ ಕಾರ್ಮಿಕರಿಗೆ ಸಂಪೂರ್ಣ ಪರಿಹಾರವನ್ನು ಫ್ಯಾಕ್ಟರಿ ಮಾಲಕನಿಂದ ವಸೂಲಿ ಮಾಡುವಂತೆ ಹಾಗೂ ಕಾರ್ಮಿಕ ಇಲಾಖೆಯು ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ತಪ್ಪಿದಲ್ಲಿ ಮುಂದೆ ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಮಂಡಳಿ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರ ನೇತೃತ್ವದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವುದೆಂದು ಜಯ ಪೂಜಾರಿ ಲಕ್ಷ್ಮಿನಗರ ಆಗ್ರಹಿಸಿದ್ದಾರೆ.
Trending
- ರೋಗಿ ಸೇವೆಯಲ್ಲಿ ಕನ್ನಡಕ್ಕೆ ಆದ್ಯತೆ: ವೆನ್ಲಾಕ್ ಆಸ್ಪತ್ರೆಯ ನಿರ್ದೇಶನಕ್ಕೆ ಕೆಎಂಸಿ ವಿದ್ಯಾರ್ಥಿಗಳಿಂದ ಸಕಾರಾತ್ಮಕ ಸ್ಪಂದನೆ
- ಆಟದ ಮೈದಾನ ಉಳಿಸಿ ಮಕ್ಕಳ ಹಕ್ಕು ಕಾಪಾಡಿದ ತುಳುನಾಡ ರಕ್ಷಣಾ ವೇದಿಕೆ
- ಜೆಇಇ ಅಡ್ವಾನ್ಸ್ನಲ್ಲಿ ರಾಷ್ಟ್ರ ಮಟ್ಟದ ಸಾಧನೆ: ವಿದ್ಯಾರ್ಥಿ ಬಿ. ವಿಶ್ರುತ್ ಕೃಷ್ಣ ಆರ್. ಭಟ್ಗೆ ಶಾಸಕ ವೇದವ್ಯಾಸ ಕಾಮತ್ ಅಭಿನಂದನೆ
- ದಿವಂಗತ ದೇವಕಿ ಸಂಜೀವ ಶೆಟ್ಟಿ ಸ್ಮರಣಾರ್ಥ ಬಡ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ
- ಕುಡುಪು ದೇವಳದಲ್ಲಿ ತುಳು ‘ಮಂದಾರ ರಾಮಾಯಣ’ ಸಪ್ತಾಹ
- ದಾವಣಗೆರೆ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ – 10 ಮಂದಿ ವಶಕ್ಕೆ, ತನಿಖೆ ಮುಂದುವರಿಕೆ
- ಹನಿಟ್ರ್ಯಾಪ್ ಮೂಲಕ ಕೋಟ್ಯಂತರ ರೂಪಾಯಿ ವಸೂಲಿ ಆರೋಪ: ಇಬ್ಬರ ಬಂಧನ
- 21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ಕಡಿವಾಣ ‘No ID, No Entry’ ನಿಯಮ ಜಾರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ

