ದಿನಾಂಕ ಜೂನ್ 18-2025ರಂದು ಪ್ರವೀಣ ಎಂಬ 29 ವರ್ಷ ಪ್ರಾಯದ ಯುವಕನಿಗೆ ಬೆಳಿಗ್ಗೆ ಏಳು ಗಂಟೆಯಿಂದ ಫ್ಯಾಕ್ಟರಿಗೆ ಹೋದಾಗ ಅಲ್ಲಿನ
ಹೆಚ್ ಎ ಆರ್ ಚಂದ್ರಶೇಖರ್ ಎಂಬವರು ಪ್ರವೀಣನನ್ನು ಗೇಟಿನ ಒಳಗೆ ಬಾರದಂತೆ ತಡೆದು ಏರುದನಿಯಿಂದ ಬೆದರಿಸಿ ಬೈಕ್ ಅನ್ನು ತಡೆದು ನಿಲ್ಲಿಸಿ ಫ್ಯಾಕ್ಟರಿ ಮಾಲೀಕ ಸಂಪತ್ ಶೆಟ್ಟಿ ಬರುವವರೆಗೆ ನಿನ್ನನ್ನು ಒಳಗೆ ಬಿಡಬಾರದು ಎಂದು ಹೇಳಿದ್ದಾರೆ ಎಂದು ಗದರಿಸಿ ಅವನ ಬೈಕ್ ಮತ್ತು ಬೈಕ್ ಕೀಯನ್ನು ಕಸಿದುಕೊಂಡು ನಂತರ ಬೆಳಿಗ್ಗೆ 9.30 ಗಂಟೆಗೆ ಮಾಲೀಕರಾದ ಸಂಪತ್ ಶೆಟ್ಟಿ ರವರು ಬಂದು ಆತನನ್ನು ಉದ್ದೇಶಿಸಿ ಬೋಳಿ ಮಗನೆ ನಿನಗೆ ಬೂಟ್ ಕಾಲಲ್ಲಿ ಒದೆಯುತ್ತೇನೆ ಎಂದು ಬೆದರಿಸಿ 9 30 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಒಂಟಿಕಾಲಲ್ಲಿ ನಿಲ್ಲು ಇಲ್ಲ ಅಂದ್ರೆ ನಿನ್ನ ಜೀವ ಸಹಿತ ಬಿಡುವುದಿಲ್ಲ ಎಂದು ನಿಲ್ಲಿಸಿ ಅಮಾನವೀಯ ಕೃತ್ಯವನ್ನು ಈ ಕೃಷ್ಣಪ್ರಸಾದ್ ಕ್ಯಾಶ್ ಇಂಡಸ್ಟ್ರಿಯ ಮಾಲಿಕ ಸಂಪತ್ ಶೆಟ್ಟಿ, ಮತ್ತು ಚಂದ್ರಶೇಖರ್ ಎಸಗಿರುವ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ( ಬಿಎನ್ಎಸ್)
2023 ಯುಎಸ್ 126. (2)352,351,(2)3,(5) ರಂತೆ ಪ್ರಕರಣದಾಲಾಗಿದೆ ಈ ಕೃಷ್ಣಪ್ರಸಾದ್ ಕ್ಯಾಶೂಇಂಡಸ್ಟ್ರೀಸ್ ಮಾಲಿಕ ಸಂಪತ್ ಶೆಟ್ಟಿ ಯನ್ನು ಮತ್ತು ಚಂದ್ರಶೇಖರ್ ರನ್ನು ಈ ಕೂಡಲೇ ಬಂಧಿಸುವಂತೆ ತುಳುನಾಡ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಕಾರ್ಮಿಕ ಘಟಕ ಅಧ್ಯಕ್ಷ ಜಯ ಪೂಜಾರಿ ಲಕ್ಷ್ಮಿನಗರರವರು ಒತ್ತಾಯ ಹಾಗೂ ಈ ಅಮಾನವೀಯ ಕೃತ್ಯ ಎಸಗಿದ ಈ ಕಾರ್ಖಾನೆಯನ್ನು ಸರಕಾರ ಕೂಡಲೇ ಮುಟ್ಟುಗೋಲು. ಹಾಕಿಕೊಳ್ಳಬೇಕು ಮತ್ತು ಇದುವರೆಗೆ ಈ ಒಂದು ಫ್ಯಾಕ್ಟರಿಯಲ್ಲಿ ದೌರ್ಜನ್ಯಕ್ಕೊಳಗಾದ ಎಲ್ಲಾ ಕಾರ್ಮಿಕರಿಗೆ ಸಂಪೂರ್ಣ ಪರಿಹಾರವನ್ನು ಫ್ಯಾಕ್ಟರಿ ಮಾಲಕನಿಂದ ವಸೂಲಿ ಮಾಡುವಂತೆ ಹಾಗೂ ಕಾರ್ಮಿಕ ಇಲಾಖೆಯು ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ತಪ್ಪಿದಲ್ಲಿ ಮುಂದೆ ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಮಂಡಳಿ ಅಧ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು ರವರ ನೇತೃತ್ವದಲ್ಲಿ ಬೃಹತ್ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳುವುದೆಂದು ಜಯ ಪೂಜಾರಿ ಲಕ್ಷ್ಮಿನಗರ ಆಗ್ರಹಿಸಿದ್ದಾರೆ.
Trending
- ವಿಘ್ನವಿನಾಯಕನ ಆಗಮನಕ್ಕೆ ತುಳುನಾಡಿನಲ್ಲಿ ಕಂಗೊಳಿಸಿದೆ ಮನೆಮನೆಗಳಲ್ಲಿ ಭಕ್ತಿ–ಮಂಟಪಗಳಲ್ಲಿ ಸಂಭ್ರಮ; ಶಾಂತಿ, ಸೌಹಾರ್ದಕ್ಕೆ ಪೊಲೀಸ್ ಕಟ್ಟೆಚ್ಚರ
- ಕದ್ರಿ ಮಾರ್ಕೆಟ್ನಲ್ಲಿ ಕೊಂಕಣ್ ಕ್ಯಾಥೊಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಪ್ರಧಾನ ಶಾಖೆ ಉದ್ಘಾಟನೆ ಗ್ರಾಹಕರಿಗೆ ಸುಲಭ ಹಣಕಾಸು ಸೇವೆ ಒದಗಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ
- ಮಾದಕ ವ್ಯಸನದ ವಿರುದ್ಧ ಮಂಗಳೂರು ಪೊಲೀಸರ ಸಮರ: 9 ಮಂದಿ ಬಂಧನ
- ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ಬಂಡೆ ಸ್ಫೋಟ: ಇಬ್ಬರ ಬಂಧನ
- ಡಾ.ಎಂ ಫಾರೂಕ್ ಚಂದ್ರನಗರ ಇವರಿಗೆ ಸುನ್ನಿ ಯುವ ಸಂಘ, ಕೆ.ಎಂ.ಜೆ, ಎಸ್.ಎಸ್.ಎಫ್ ಮಜೂರು ಘಟಕದ ವತಿಯಿಂದ ಸನ್ಮಾನ
- ಸತೀಶ್ ಜಾರಕಿಹೊಳಿ ಆಪ್ತರ ನಿವಾಸ, ಕಚೇರಿಗಳ ಮೇಲೆ ಇ.ಡಿ. ಶೋಧ ₹3.3 ಕೋಟಿ ಲೆಕ್ಕಕ್ಕೆ ಬಾರದ ನಗದು, ₹15 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ವಶ
- ಗಣೇಶೋತ್ಸವ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲಿ ಸೆ. 14, 16 ಮತ್ತು 18ರಂದು ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಉಡುಪಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ: ಈ 3 ದಿನಗಳ ಕಾಲ ಜಿಲ್ಲಾದ್ಯಂತ ಬಾರ್, ವೈನ್ಶಾಪ್ ಬಂದ್ಉಡುಪಿ ಜಿಲ್ಲಾಧಿಕಾರಿ ಖಡಕ್ ಆದೇಶ
- ತುರ್ತು ರಕ್ತದಾನ: ಮೊಹಮ್ಮದ್ ಅಲ್ತಾಫ್ ಹಾಗೂ ಯಾಶಿನ್ ಮಾನವೀಯ ಸೇವೆಗೆ ಮೆಚ್ಚುಗೆ

