Tuesday, March 19, 2024
spot_img
More

    Latest Posts

    ಇಂದು ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಹೂರ್ತ

    ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ನಿಗದಿಗೆ ಕ್ಷಣಗಣನೆ ಆರಂಭಗೊಂಡಿದೆ. ಕೇಂದ್ರ ಚುನಾವಣಾ ಆಯೋಗ ಬುಧವಾರ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಲಿದೆ.

    ಚುನಾವಣಾ ಆಯೋಗ ಹಾಗೂ ರಾಜ್ಯ ಸರ್ಕಾರದ ಉನ್ನತ ಮೂಲಗಳ ಪ್ರಕಾರ, ಚುನಾವಣಾ ಅಧಿಸೂಚನೆ ಪ್ರಕಟಿಸುವುದಕ್ಕೆ ಅಗತ್ಯವಾದ ಎಲ್ಲ ಸಿದ್ಧತೆಗಳನ್ನು ಕೇಂದ್ರ ಆಯೋಗ ಪೂರ್ಣಗೊಳಿಸಿದೆ.

    ಕೇಂದ್ರ ಮುಖ್ಯ ಚುನಾವಣಾ ಆಯುಕ್ತರಾದ ರಾಜೀವ್‌ ಕುಮಾರ್‌ ಅವರು ದೆಹಲಿಯ ವಿಜ್ಞಾನ ಭವನದ ಕಚೇರಿಯಲ್ಲಿ ಬೆಳಗ್ಗೆ 11:30 ಕ್ಕೆ ಸುದ್ದಿಗೋಷ್ಠಿ ನಡೆಸಿ ಕರ್ನಾಟಕ ವಿಧಾನ ಸಭಾ ಚುನಾವಣಾ ದಿನಾಂಕವನ್ನು ನಿಗದಿಪಡಿಸಲಿದ್ದಾರೆ.

    ದಾವಣಗೆರೆಯಲ್ಲಿ ನಡೆಯುವ ಮಹಾಸಂಗಮ ಕಾರ್ಯಕ್ರಮದ ಬಳಿಕ ಯಾವುದೇ ಕ್ಷಣದಲ್ಲಿ ಅಧಿಸೂಚನೆ ಪ್ರಕಟವಾಗಬಹುದೆಂದು ರಾಜಕೀಯ ಪಕ್ಷಗಳು ನಿರೀಕ್ಷಿಸಿದ್ದವು. ಮಾ.27ರಂದೇ ಘೋಷಣೆಯಾಗಬಹುದೆಂಬುದು ಬಹುತೇಕರ ನಿರೀಕ್ಷೆಯಾಗಿತ್ತು. ಬುಧವಾರವೇ ವೇಳಾಪಟ್ಟಿ ಘೋಷಣೆಯಾದರೆ, ತಕ್ಷಣವೇ ಮಾದರಿ ನೀತಿ ಸಂಹಿತೆ ಜಾರಿಯಾಗಲಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss