ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ. ಹಿಜಾಬ್ ಧರಿಸುವಂತಿಲ್ಲ ಎಂಬುದಾಗಿ ಹೈಕೋರ್ಟ್ ತೀರ್ಸದಸ್ಯ ಪೀಠವು ನಿನ್ನೆ ಮಹತ್ವದ ತೀರ್ಪು ನೀಡಿತ್ತು. ರಾಜ್ಯಾಧ್ಯಂತ ಹೈಕೋರ್ಟ್ ತೀರ್ಪಿನ ವಿರುದ್ಧ ವಿದ್ಯಾರ್ಥಿನಿಯರು ಸಿಡಿದೆದ್ದಿದ್ದಾರೆ.
ಅಲ್ಲದೇ ತರಗತಿ, ಪರೀಕ್ಷೆಯನ್ನು ಬಹಿಷ್ಕರಿಸಿ ಮನೆಗೆ ನಡೆದಿದ್ದಾರೆ. ಇದೇ ಸಂದರ್ಭದಲ್ಲಿ ಹಿಜಾಬ್ ಧರಿಸೋದಕ್ಕೆ ಅನುಮತಿ ಕೋರಿ ನಾಳೆ ಕರ್ನಾಟಕ ಬಂದ್ ಗೆ ಮುಸ್ಲೀಂ ಮುಖಂಡರಿಂದ ಕರೆ ನೀಡಲಾಗಿದೆ.