ಜಮ್ಮುಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರಗಾಮಿ ದಾಳಿ ಮಾನವೀಯತೆಯ ಮೇಲೆ ನಡೆದ ಘೋರ ದಾಳಿಯಾಗಿದೆ. ತುಳುನಾಡ ರಕ್ಷಣಾ ವೇದಿಕೆ ಇದನ್ನು ತೀವ್ರ ಕಠಿಣವಾಗಿ ಖಂಡಿಸುತ್ತದೆ.
*ಕಾಶ್ಮೀರ ಕಣಿವೆ ಸಹಜತೆಗೆ ಮರಳಿದೆ ಎಂಬ ಧೈರ್ಯ ವಿಶ್ವಾಸ ಹೆಚ್ಚಾಗುತ್ತಿರುವ ಮಧ್ಯೆಯೇ ಈ ಘಟನೆ ಜನರನ್ನು ಬೆಚ್ಚಿಬೀಳಿಸಿದೆ. ನಿಸ್ಸಹಾಯಕ ಮಹಿಳೆ ಮತ್ತು ಮಕ್ಕಳೆದುರು ಅವರ ತಂದೆಯನ್ನು , ಪತ್ನಿ ಮುಂದೆ ಗಂಡಂದಿರನ್ನು ಕೊಲ್ಲುವವರು ಮನುಷ್ಯರೇ ಅಲ್ಲ.
ಕಾಶ್ಮೀರದಲ್ಲಿ ಪ್ರವಾಸೋದ್ಯಮ ನಂಬಿ ಬದುಕುವ ಜನರು ಇಂತಹ ಘಟನೆಯಿಂದ ಕಂಗಾಲಾಗಿದ್ದಾರೆ. ಬದುಕಿನ ಕೆಲ ದಿನಗಳನ್ನು ಸಂತೋಷ ಮೋಜು ಮಾಡಲು ದೇಶ ವಿದೇಶಗಳಿಂದ ಬರುವ ಭೂಲೋಕದ ಸ್ವರ್ಗ ಎಂಬ ಖ್ಯಾತಿಯ ಕಾಶ್ಮೀರದಲ್ಲಿ ಮುಂದೆಂದೂ ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೇಂದ್ರ ಸರಕಾರ ಕೈಗೊಳ್ಳಬೇಕೆಂದು ತುಳುನಾಡ ರಕ್ಷಣಾ ವೇದಿಕೆ ಕೇಂದ್ರೀಯ ಅಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪು ಆಗ್ರಹಿಸಿದರು ಎಂದು ತುಳುನಾಡ ರಕ್ಷಣಾ ವೇದಿಕೆ ಪ್ರಕಟನೆ ತಿಳಿಸಿದೆ
Trending
- ತುಳುನಾಡ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಅಧ್ಯಕ್ಷ ಪ್ರಶಾಂತ್ ರೈ ಮರುವಂಜ ದಂಪತಿಗೆ ಸನ್ಮಾನ
- ಅಕ್ರಮ ಮರಳು ಸಂಗ್ರಹ : ಪೊಲೀಸರಿಂದ ದಾಳಿ…!!
- ಮಂಗಳೂರು : ಸರ್ವೆ ಮೇಲ್ವಿಚಾರಕ ಮಂಜುನಾಥ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
- ಕೋಟ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನ : ಇಬ್ಬರು ಸಾವು..!
- ಕಾರ್ಕಳ : ಶಸ್ತ್ರ ಚಿಕಿತ್ಸೆ ವೇಳೆ ಮಹಿಳೆ ಮೃತ್ಯು : ವೈದ್ಯರ ವಿರುದ್ಧ ಸಂಬಂಧಿಕರ ಆಕ್ರೋಶ…!!
- ಮೇ 16 ರಂದು ಮುಖ್ಯಮಂತ್ರಿಗಳು ದಕ್ಷಿಣ ಕನ್ನಡ ಜಿಲ್ಲೆಗೆ
- ಕಡಲು ಕೊರೆತ ಕಾಮಗಾರಿ:ಸ್ಥಳೀಯರ ವಿಶ್ವಾಸ ತೆಗೆದುಕೊಳ್ಳಲು ಸ್ಪೀಕರ್ ಸೂಚನೆ
- ಎಳನೀರು-ದಿಡುಪೆ ರಸ್ತೆಯ ಅಭಿವೃದ್ಧಿಗೆ ಉಸ್ತುವಾರಿ ಸಚಿವರಿಂದ ಮುಖ್ಯಮಂತ್ರಿಗಳಿಗೆ ಮನವಿ