ಕೊಪ್ಪಳ(ಕುಕನೂರು): ಕೋಳಿ ಫಾರಂ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ಮಾಡಿದ ಘಟನೆ ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮದಲ್ಲಿ ಕೋಳಿ ಫಾರಂ ರನ್ಯಾ ರಾವ್ ತಂದೆ ರಾಮಚಂದ್ರರಾವ್ ಸಂಬಂಧಿಯ ಹೆಸರಲ್ಲಿದ್ದು, ಹಾಗಾಗಿ ರನ್ಯಾ ರಾವ್ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ಹಿಂದೆ ಹಲವು ಬಾರಿ ರನ್ಯಾ ರಾವ್ ತಂದೆ ರಾಮಚಂದ್ರರಾವ್ ಬಂದು ಹೋಗಿದ್ದರು.
ಬುಧವಾರ ಬೆಳಿಗ್ಗೆಯಿಂದ ಕೋಳಿ ಫಾರಂ ಗೇಟ್ ಬಂದ್ ಮಾಡಿ, ಇಡಿ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇಡಿ ಅಧಿಕಾರಿಗಳು ದೆಹಲಿಯಿಂದ ಬಂದು, ದಾಳಿ ಮಾಡಿದ್ದಾರೆ ಎಂಬ ಮಾಹಿತಿ ಇದ್ದು, ಭದ್ರತೆಗಾಗಿ ಬಿ.ಎಸ್.ಎಫ್ ಸಿಬ್ಬಂದಿಯನ್ನು ಕರೆದುಕೊಂಡು ಬಂದಿದ್ದಾರೆ. ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಸ್ಥಳೀಯ ಪೊಲೀಸರನ್ನೂ ಬದಿಗಿಟ್ಟು ಕಾರ್ಯಾಚರಣೆ ಮಾಡಿರುವುದು ಗಮನಾರ್ಹ. ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ಲಭ್ಯ ವಾಗಬೇಕಾಗಿದೆ.
Trending
- ಉಡುಪಿ ಕ್ಷೇತ್ರದಲ್ಲಿ ಜೆಡಿಎಸ್ ಸಂಘಟನೆಗೆ ಹೊಸ ಚೈತನ್ಯ – ಹಲವಾರು ಪ್ರಮುಖರು ಜೆಡಿಎಸ್ ಸೇರ್ಪಡೆ
- ಗ್ರೇಟರ್ ಬೆಂಗಳೂರು ಪಕ್ಷದ ಮುಸ್ಲಿಂ ಅಲ್ಪಸಂಖ್ಯಾತರ ವಿಭಾಗದ ಸಭೆ: ಜಿಬಿಎ ಚುನಾವಣಾ ಪೂರ್ವ ಸಿದ್ಧತೆ ಕುರಿತು ಮಹತ್ವದ ಚರ್ಚೆ
- ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಉಪನ್ಯಾಸ ಜೂನ್ 9ರಂದು
- ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪ್ರಮುಖರ ಸಭೆ ಯಶಸ್ವಿಸಂಘಟನೆ ಬಲವರ್ಧನೆಗೆ ಒತ್ತು – ಕಾರ್ಯಕರ್ತರಿಗೆ ಮುಖಂಡರ ಕರೆ
- ಜೆಡಿಎಸ್ ಮಹಿಳಾ ಘಟಕದ ಉತ್ತರ ಕನ್ನಡ ಜಿಲ್ಲಾ ಅಧ್ಯಕ್ಷೆಯಾಗಿ ಮೋಹಿನಿ ನಾಯ್ಕ್ ನೇಮಕ
- ಬ್ರಹ್ಮಾವರದಲ್ಲಿ ಯುವತಿ ಅನುಮಾನಾಸ್ಪದ ಸಾವು: ಅಪಾರ್ಟ್ಮೆಂಟ್ ಕೊಠಡಿಯಲ್ಲಿ ಮೃತದೇಹ ಪತ್ತೆ, ಮೂರ್ಛೆ ರೋಗ ಕಾರಣವೇ?
- ಮೆಲ್ಕಾರ್ ಫ್ಲೈಓವರ್ ಬಳಿ ಲಕ್ಷಾಂತರ ಮೌಲ್ಯದ ಎಂಡಿಎಂಎ ವಶ: ಮೂವರು ಆರೋಪಿಗಳ ಬಂಧನ
- ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ? – ಡಿ.ಕೆ. ಶಿವಕುಮಾರ್ಗೆ ಕಾಂಗ್ರೇಸ್ ಶಾಸಕ ಕೆ.ಎನ್. ರಾಜಣ್ಣ ತಿರುಗೇಟು

