ಕೊಲ್ಯ: ಪ್ರಧಾನಿ ನರೇಂದ್ರ ಮೋದಿಜಿ ಯವರ ಕಲ್ಪನೆಯಂತೆ ಶ್ರೀ ಶಾರದಾ ಮಹೋತ್ಸವ ಸಮಿತಿ (ರಿ.) ಕೊಲ್ಯ ಇದರ ವತಿಯಿಂದ ಆಯುಷ್ಮಾನ್ ಆರೋಗ್ಯ (ಅಭಾ) ಕಾರ್ಡ್ ನೋಂದಣಿ ಕಾರ್ಯಕ್ರಮವು ಶ್ರೀ ಶಾರದಾ ಸಭಾ ಸದನ
ಕೊಲ್ಯ, ಇದರ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ರಾದ ಹಾಗೂ ಕೊಲ್ಯ ಶಾರದಾ ಮಹೋತ್ಸವ ಕಟ್ಟಡ ಸಮಿತಿ ಅಧ್ಯಕ್ಷರಾದ ಸತೀಶ್ ಕುಂಪಲ ರವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆಗೈದು
ಆಯುಷ್ಮಾನ್ (ಅಭಾ) ಕಾರ್ಡಿನ ಪ್ರಾಮುಖ್ಯತೆ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಶಾರದ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಪ್ರಕಾಶ್ ಹೆಚ್ ಕೊಲ್ಯ, ಉಪಾಧ್ಯಕ್ಷರಾದ ಮೋಹನ್ ಶೆಟ್ಟಿ ಕುಂಪಲ, ಶ್ರೀ ಶಾರದ ಮಹೋತ್ಸವ ಉತ್ಸವ ಸಮಿತಿ ಅಧ್ಯಕ್ಷರಾದ ಹರೀಶ್ ಉಳ್ಳಾಲಬೈಲ್ ಉಪಸ್ಥಿತರಿದ್ದರು.
ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ರಾಜೇಶ್ ಕುಮಾರ್ ಕೆ ಎಸ್ ಕೊಲ್ಯ ಕಾರ್ಯಕ್ರಮ ನಿರೂಪಿಸಿದರು.