ಉಡುಪಿ: ತುಳುನಾಡಿನ ಬಹುತೇಕ ಜನ ನಂಬುವ ಕಾರ್ಣಿಕ ಶಕ್ತಿ ಕೊರಗಜ್ಜ ದೈವದ ಪವಾಡ ಮತ್ತೆ ಸಾಬೀತಾಗಿದೆ. ವೈದ್ಯರೇ ಮಗು ಬದುಕುವ ಭರವಸೆಯನ್ನು ನೀಡದ ಸಂದರ್ಭದಲ್ಲಿ ಮಗುವಿನ ಹೆತ್ತವರು ಕೊರಗಜ್ಜನಲ್ಲಿ ಪ್ರಾರ್ಥಿಸಿ ಮಗುವಿನ ಹಣೆಗೆ ಕರಿಗಂಧ ಹಚ್ಚಿದ ಕೆಲವೇ ಗಂಟೆಗಳಲ್ಲಿ ಮಗುವಿನ ಆರೋಗ್ಯದಲ್ಲಿ ದಿಢೀರ್ ಚೇತರಿಕೆ ಕಂಡ ಘಟನೆ ಉಡುಪಿಯಲ್ಲಿ ನಡೆದಿದೆ.
ಸಾಗರ ಮೂಲದ ನಾಗಶ್ರೀ ಎಂಬುವವರ ನಾಲ್ಕು ತಿಂಗಳ ಪುಟ್ಟ ಹೆಣ್ಣು ಮಗುವಿಗೆ ವಿಪರೀತ ಜ್ವರ ಕಂಡು ಬಂದಿತ್ತು. ಎರಡು ದಿನ ಕಳೆದರೂ ಜ್ವರ ಕಡಿಮೆಯಾಗದೇ ಮಗು ಅಳು ನಿಲ್ಲಿಸುತ್ತಿರಲ್ಲಿಲ್ಲ. ಹೀಗಾಗಿ ಕುಂದಾಪುರದ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಅಸ್ಪತ್ರೆಯಲ್ಲಿ ಮಗುವಿಗೆ ಪಿಡ್ಸ್ ಇರುವುದಾಗಿಯೂ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಅಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದ್ದರು. ಹೀಗಾಗಿ ಮಣಿಪಾಲ ಆಸ್ಪತ್ರೆಯಲ್ಲಿ ಐಸಿಯು ಘಟಕದಲ್ಲಿಟ್ಟಿದ್ದರು. ಆದರು ಮಗುವಿನ ಅರೋಗ್ಯ ಚಿಂತಾಜನಕವಾಗಿತ್ತು. ಅಷ್ಟೇ ಅಲ್ಲ ಪದೇ ಪದೇ ಮಗುವಿನ ಹೃದಯ ಸ್ತಬ್ಧವಾಗುತ್ತಿರುವುದರ ಬಗ್ಗೆ ವೈದರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ವೈದರ ಪ್ರಯತ್ನ ಮಾಡುವುದಾಗಿಯೂ ಭರವಸೆ ನೀಡಿದರೂ ಮಗುವಿನ ಪ್ರಾಣ ಉಳಿಯುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದರು. ಮಗುವಿನ ಪರಿಸ್ಥಿತಿ ಕಂಡ ಕುಟುಂಬಸ್ಥರು ಕಂಗಾಲಾಗಿ ಹೋಗಿದ್ದರು. ಇದ್ದ ಒಂದು ಮಗುವನ್ನು ಕಳೆದುಕೊಳ್ಳುವ ಭಯದಲ್ಲಿದ್ದ ಪೋಷಕರಿಗೆ ಅಸ್ಪತ್ರೆ ಬಳಿಯಿದ್ದ ಓರ್ವ ವ್ಯಕ್ತಿ ಕೊರಗಜ್ಜ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ ಹಿನ್ನಲೆಯಲ್ಲಿ ಮಗುವಿನ ಹೆತ್ತವರು ಇಂದ್ರಾಳಿ, ಎಂಜಿಎಂ ಹಾಸ್ಟೆಲ್ ಬಳಿಯಿರುವ ಕೊರಗಜ್ಜನ ಕ್ಷೇತ್ರಕ್ಕೆ ಬಂದು ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಪಡೆದು ತೆರಳಿದ್ದರು. ಕೊರಗಜ್ಜನ ಕರಿಗಂಧವನ್ನು ಮಗುವಿನ ಹಣೆಗೆ ಹಚ್ಚುತ್ತಿದ್ದಂತೆಯೇ, ಗಂಭೀರ ಸ್ಥಿತಿಯಲ್ಲಿದ್ದ ಪುಟ್ಟ ಕಂದಮ್ಮನ ಅರೋಗ್ಯ ದಿಢೀರಾಗಿ ಚೇತರಿಕೆ ಕಾಣಿಸಿಕೊಳ್ಳಲು ಪ್ರಾರಂಭಿಸಿತ್ತು. ವೈದರು ಕೂಡ ತಮ್ಮ ಕೈಲಾದ ಪ್ರಯತ್ನಗಳನ್ನು ಮಾಡುವ ಮೂಲಕ ಮಗು ಅರೋಗ್ಯವಾಗಿ ಹೆತ್ತಮ್ಮಳ ಕೈಯಲ್ಲಿ ಮತ್ತೆ ಬಂದು ಸೇರಿದೆ. ಹೃದಯ ಬಡಿತವೇ ನಿಂತು ಹೋಯಿತು ಎಂದಿದ್ದ ಮಗು ಮತ್ತೆ ಕಿಲಕಿಲ ನಗುತ್ತಿರುವುದನ್ನು ಕಂಡ ಕುಟುಂಬಸ್ಥರ ಸಂತೋಷ ಮುಗಿಲು ಮುಟ್ಟಿದೆ. ಯಾವುದೇ ಕಷ್ಟಕಾಲದಲ್ಲಿ ಕೈಮುಗಿದೊಡನೆ ಸಹಾಯಕ್ಕೆ ನಿಲ್ಲುವ ಆ ಶಕ್ತಿಯ ಬಗ್ಗೆ ಕುಟುಂಬಸ್ಥರು ದಂಗಾಗಿ ಹೋಗಿದ್ದಾರೆ. ಮಗು ಆರೋಗ್ಯದಲ್ಲಿ ಸುಧಾರಿಸಿದ್ದ ಕಾರಣ ಅಸ್ಪತ್ರೆಯಿಂದ ನೇರವಾಗಿ ಇಂದ್ರಾಳಿ ಬಳಿಯ ಕೊರಗಜ್ಜನ ಕ್ಷೇತ್ರಕ್ಕೆ ಬಂದು ಮಗುವನ್ನು ಕೊರಗಜ್ಜ ಸ್ವಾಮಿಯ ಮುಂದಿಟ್ಟು ಪ್ರಾರ್ಥನೆ ಸಲ್ಲಿಸಿ ಗಂಧ ಪ್ರಸಾದ ಪಡೆದುಕೊಂಡರು. ಈ ಬಗ್ಗೆ ಅಚ್ಚರಿ ಹಾಗೂ ಸಂತೋಷವನ್ನು ವ್ಯಕ್ತಪಡಿಸಿರುವ ಮಗುವಿನ ಪೋಷಕರು ‘ಗಂಭೀರ ಪರಿಸ್ಥಿತಿಯಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ಪುಟ್ಟ ಕಂದಮ್ಮನನ್ನು ಕೊರಗಜ್ಜನೇ ಸಲಹಿದ್ದು. ಬದುಕಿರುವವರೆಗೂ ಈ ಮಗು ಕೊರಗಜ್ಜನ ಪ್ರಸಾದವೆಂದೇ ನಂಬಿ ಬದುಕುತ್ತೇವೆ’ ಎಂದು ಹೇಳಿದ್ದಾರೆ.