ಬ್ರಹ್ಮಾವರ ತಾಲೂಕಿನ ಕೋಟ ಸಮೀಪ ಅಕ್ರಮ ಐಪಿಎಲ್ ಬೆಟ್ಟಿಂಗ್ ದಂಧೆಯನ್ನು ಕೋಟ ಪೊಲೀಸರು ಭೇದಿಸಿದ್ದು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕೋಟ ಮಣೂರು ಗ್ರಾಮದ ಬಾಳೆಬೆಟ್ಟು ಬಸ್ ನಿಲ್ದಾಣದ ಬಳಿ ನಡೆದ ದಾಳಿಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ.
ಏಪ್ರಿಲ್ 2ರಂದು ಸಂಜೆ 5.45ರ ಸುಮಾರಿಗೆ ಖಚಿತ ಮಾಹಿತಿಯ ಮೇರೆಗೆ ಪಿಎಸ್ಐ ಮಹಾಂತೇಶ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಸ್ಥಳದಲ್ಲಿದ್ದ ವ್ಯಕ್ತಿಯೋರ್ವ ಮೊಬೈಲ್ ಮೂಲಕ ಸಾರ್ವಜನಿಕರಿಂದ ಹಣ ಸಂಗ್ರಹಿಸಿ, Kolkata Knight Riders (KKR) ಮತ್ತು Sunrisers Hyderabad (SRH) ತಂಡಗಳ ನಡುವಿನ ಐಪಿಎಲ್ ಟಿ20 ಪಂದ್ಯಕ್ಕೆ ಸಂಬಂಧಿಸಿದಂತೆ ಅಕ್ರಮ ಬೆಟ್ಟಿಂಗ್ ನಡೆಸುತ್ತಿರುವುದು ಪತ್ತೆಯಾಯಿತು.
ತಕ್ಷಣವೇ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆತನು ಆದಿತ್ಯ ಶೆಟ್ಟಿ (28) ಎಂದು ಗುರುತಿಸಲ್ಪಟ್ಟಿದ್ದಾನೆ. ನೂಜಿಯ ಸಂದೀಪ ಗಾಣಿಗನ ಸೂಚನೆಯಂತೆ “PARKER” ಎಂಬ ಕ್ರಿಕೆಟ್ ಬೆಟ್ಟಿಂಗ್ ವೆಬ್ಸೈಟ್ ಮೂಲಕ ಈ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದುದಾಗಿ ಆತ ಒಪ್ಪಿಕೊಂಡಿದ್ದಾನೆ.
ಹೆಚ್ಚುವರಿ ವಿಚಾರಣೆಯಲ್ಲಿ, ಇತ್ತೀಚೆಗೆ ನಡೆದ Lucknow Super Giants (LSG) ಮತ್ತು Delhi Capitals ನಡುವಿನ ಪಂದ್ಯದಲ್ಲೂ ಇದೇ ರೀತಿಯಲ್ಲಿ ಬೆಟ್ಟಿಂಗ್ ಹಣ ಸಂಗ್ರಹಿಸಿ, ಬ್ಯಾಂಕ್ ಖಾತೆಗೆ ಜಮಾ ಮಾಡಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಪೊಲೀಸರು ಆರೋಪಿಯಿಂದ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದು, ಪ್ರಕರಣದಲ್ಲಿ ಇನ್ನೊಬ್ಬ ಪ್ರಮುಖ ಆರೋಪಿಯಾದ ಸಂದೀಪ ಗಾಣಿಗನಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಈ ಕುರಿತು ಕೋಟ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 57/2026 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಕಲಂ 78 KP Act, 112 BNS ಹಾಗೂ 66(D) IT Act ಅಡಿಯಲ್ಲಿ ತನಿಖೆ ಮುಂದುವರಿಯುತ್ತಿದೆ.
Trending
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
- ಪುತ್ತೂರಿನ ಸಾನ್ವಿತಾ ಎಂ. ರೈ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆ
- ಗ್ರೀನ್ ವ್ಯೂ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
- ಮಂಗಳೂರಿನ ಸಿಟಿ ಸೆಂಟರ್ KFC ಮಳಿಗೆಯಲ್ಲಿ 9 ತಿಂಗಳ ಹಿಂದಿನ ಮಾಂಸ ಪತ್ತೆ: ಆರೋಗ್ಯಾಧಿಕಾರಿಗಳಿಂದ ಮಳಿಗೆಗೆ ಬೀಗ
- ತಲ್ಲೂರಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಸಿಹಿ ವಿತರಣೆ, ಶೇ.90 ಅಂಕ ಗಳಿಸಿದ ಸ್ಪಂದಿತ ಪೂಜಾರಿಗೆ ಡಾ. ರವೀಂದ್ರ ತಲ್ಲೂರು ಅವರಿಂದ ಸನ್ಮಾನ
- ಡಿ.ಕೆ. ಯೂಸ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ನ ನೂತನ ಕಾನೂನು ಸಲಹೆಗಾರರಾಗಿ ಶ್ರೀ ಸಿನಾನ್ ಸಿದ್ದೀಕ್ ನೇಮಕ

