ಶಿವಮೊಗ್ಗ: ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಮಾಚೇನಹಳ್ಳಿಯ ಡೈರಿ ಸಮೀಪದಲ್ಲಿ ನಡೆದಿದೆ.
ಜಯಂತಿ ಗ್ರಾಮದ ಅಂಥೋಣಿ (34), ಮಂಜುನಾಥ್ (28) ಮೃತ ದುರ್ದೈವಿಗಳು. ಕೆಎಸ್ಆರ್ಟಿಸಿ ಬಸ್ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಇತ್ತ ಇದೇ ಮಾರ್ಗವಾಗಿ ಬಂದ ಬೈಕ್ ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಎರಡು ವಾಹನಗಳ ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಈ ಸಂಬಂಧ ಭದ್ರಾವತಿ ಸಂಚಾರ ನಿಯಂತ್ರಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.