ಕಡಬ: ಕೆಎಸ್ಸಾರ್ಟಿಸಿ ಬಸ್ ಕಂಡಕ್ಟರ್ ವೃದ್ಧರೋರ್ವರನ್ನು ಚಿಲ್ಲರೆ ನೀಡಿಲ್ಲವೆಂಬ ಕಾರಣಕ್ಕೆ ಅರ್ಧ ದಾರಿಯಲ್ಲೇ ಇಳಿಸಿಹೋದ ಘಟನೆ ಇಂದು ಕಡಬದಲ್ಲಿ ನಡೆದಿದೆ.
ಬೆಳಿಗ್ಗೆ 9.30 ಗಂಟೆಗೆ ಕಲ್ಲುಗುಡ್ಡೆಯಿಂದ ಇಚಿಲಂಪಾಡಿ ಮಾರ್ಗವಾಗಿ ಪುತ್ತೂರಿಗೆ ತೆರಳುವ ಕೆಎಸ್ಸಾರ್ಟಿಸಿ ಬಸ್ಸಿಗೆ ಹತ್ತಿದ ಕಲ್ಲುಗುಡ್ಡೆ ನಿವಾಸಿ ವೃದ್ಧರೋರ್ವರು ಕಾಂಚನ ಎಂಬಲ್ಲಿ ಇಳಿಸುವಂತೆ 200 ರೂ. ನೀಡಿದ್ದರು. ಈ ವೇಳೆ ಕಂಡಕ್ಟರ್ ಚಿಲ್ಲರೆ ಕೇಳಿದ್ದು, ವೃದ್ಧರು ಚಿಲ್ಲರೆ ಇಲ್ಲವೆಂದಾಗ ಅರ್ಧ ದಾರಿಲ್ಲೇ ಇಳಿಸಿದ್ದಾನೆ ಎನ್ನಲಾಗಿದೆ.
ಕಾಂಚನದಲ್ಲಿ ಇಳಿಯುವ ವೇಳೆ ಚಿಲ್ಲರೆ ನೀಡಿದರೆ ಸಾಕೆಂದು ವೃದ್ಧರು ಮನವಿ ಮಾಡಿಕೊಂಡರಾದರೂ, ಕ್ಯಾರೇ ಎನ್ನದ ಕಂಡಕ್ಟರ್ ಗೋಳಿಯಡ್ಕ ಎಂಬಲ್ಲಿ ಇಳಿಸಿ ಹೋಗಿದ್ದಾನೆ ಎಂದು ತಿಳಿದು ಬಂದಿದೆ.
ಕಂಡಕ್ಟರ್ ನ ಈ ಅಮಾನವೀಯ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Trending
- ಮೂಡಬಿದಿರೆ ಇನ್ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಅಕ್ಕ ಪ್ರಪುಲ್ಲ ನಾಯ್ಕ್ ಪ್ರತಿಕ್ರಿಯೆ
- ದಕ್ಷಿಣ ಕನ್ನಡ ವಿದ್ಯಾರ್ಥಿ ಜನತಾದಳ ಸಭೆ: ನಿಹಾಲ್ ಎಸ್. ಕೋಡ್ತುಗುಳಿ ಜಿಲ್ಲಾಧ್ಯಕ್ಷರಾಗಿ ಅಧಿಕಾರ ಹಸ್ತಾಂತರ
- ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ದತ್ತು ಸ್ವೀಕರಿಸಿ ಮಾಸಿಕ ಧನಸಹಾಯ ಪಡೆಯುತ್ತಿರುವ ಪಲಾನುಭವಿಗಳಿಗೆ ಸಹಾಯಧನದ ಚೆಕ್ ವಿತರಣಾ ಕಾರ್ಯಕ್ರಮ
- ಉಡುಪಿ : ಕಟಪಾಡಿ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ – ಅನಿಲ ಸೋರಿಕೆ ಶಂಕೆ, ಅಗ್ನಿಶಾಮಕ ದಳದಿಂದ ತುರ್ತು ಕಾರ್ಯಾಚರಣೆ
- ಕರವೇ ಉಡುಪಿ ಜಿಲ್ಲಾ ಸಂಘಟನೆಗೆ ರಿಕ್ಷಾ ಚಾಲಕರ ಸೇರ್ಪಡೆ
- ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ರಂಜಾನ್ ಸೌಹಾರ್ಧ ಇಫ್ತಾರ್ ಕೂಟ – ಶಾಂತಿ ಸಂದೇಶ ಸಾರಿದ ಕಾರ್ಯಕ್ರಮ
- ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಘೋಷಣೆ. ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಪಶ್ಚಿಮ ಬಂಗಾಳದಲ್ಲಿ ಎರಡು ಹಂತಗಳಲ್ಲಿ ಚುನಾವಣೆ
- ದಕ್ಷಿಣ ಕನ್ನಡ ಜಿಲ್ಲಾ ವಿದ್ಯಾರ್ಥಿ ಜನತಾದಳಕ್ಕೆ ನೂತನ ಪದಾಧಿಕಾರಿಗಳ ನೇಮಕ – ಸಂಘಟನೆ ಬಲವರ್ಧನೆಗೆ ಹೊಸ ಚೈತನ್ಯ
