Thursday, April 18, 2024
spot_img
More

    Latest Posts

    ಕಾಸರಗೋಡು: ಕೆಎಸ್ ಆರ್ ಟಿಸಿ ಬಸ್,ಲಾರಿ ಮುಖಾಮುಖಿ ಡಿಕ್ಕಿ -ನಾಲ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ !

    ಕಾಸರಗೋಡು, ಸ.03 : ರಾಷ್ಟ್ರೀಯ ಹೆದ್ದಾರಿಯ ಚೆರ್ವತ್ತೂರಿನ ಙನಂಕೈಯಲ್ಲಿ ಶುಕ್ರವಾರ ಬೆಳಿಗ್ಗೆ ನಡೆದ ಕೆಎಸ್ಆರ್‌ಟಿ‍ಸಿ ಬಸ್ಸು ಹಾಗೂ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.

    ಕಣ್ಣೂರು ಕಡೆಯಿಂದ ಕಾಞ೦ಗಾಡ್‌ಗೆ ಬರುತ್ತಿದ ಬಸ್ಸು ಮತ್ತು ಮಧ್ಯಪ್ರದೇಶದಿಂದ ಕಣ್ಣೂರು ಕಡೆಗೆ ತೆರಳುತ್ತಿದ್ದ ಸರಕು ಲಾರಿ ನಡುವೆ ಅಪಘಾತ ನಡೆದಿದೆ.ಲಾರಿಯಲ್ಲಿ ಸಿಲುಕಿದ್ದ ಚಾಲಕ ರಾಜೇಶ್ ಅವರನ್ನು ತ್ರಿಕ್ಕರಿಪುರದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬಂದಿಗಳು ಹೊರತೆಗೆದಿದ್ದು, ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಗಾಯಗೊಂಡಿದ್ದಾರೆ.ಅಪಘಾತದ ಬಳಿಕ ಒಂದೂ ಗಂಟೆಗೂ ಅಧಿಕ ಸಮಯ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿತ್ತು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss