ಮಂಗಳೂರು: Mangaluru ನಗರ ಪೊಲೀಸ್ ಕಮಿಷನರೇಟ್ ಹಾಗೂ Udupi ಜಿಲ್ಲೆ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದಿದ್ದ ಹಲವು ಗಂಭೀರ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಅನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತನನ್ನು ಹಳೆಯಂಗಡಿ ವಿಲೇಜ್ ನಿವಾಸಿ ಸಜ್ವಾನ್ ಹುಸೈನ್ (42) ಎಂದು ಗುರುತಿಸಲಾಗಿದೆ. ಈತನ ವಿರುದ್ಧ 02 ಕೊಲೆ, 04 ಕೊಲೆಯತ್ನ, ಗ್ಯಾಂಗ್ ರೇಪ್, 05 ದರೋಡೆ, ಅಪಹರಣ, ಸುಲಿಗೆ, ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ, ಕಳ್ಳತನ, ಸರಗಳ್ಳತನ, ಜೈಲಿನಲ್ಲಿಯೇ ಸಹಖೈದಿಗಳ ಮೇಲೆ ಹಲ್ಲೆ, ಅಕ್ರಮ ಕೂಟ ಸೇರಿ ಹಲ್ಲೆ, ಕೊಲೆ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ, ದರೋಡೆಗೆ ತಯಾರಿ ಹಾಗೂ ಸಂಚು ಸೇರಿದಂತೆ ವಿವಿಧ ಗಂಭೀರ ಅಪರಾಧಗಳಿಗೆ ಸಂಬಂಧಿಸಿದಂತೆ ಒಟ್ಟು ಸುಮಾರು 21 ಪ್ರಕರಣಗಳು ದಾಖಲಾಗಿವೆ.
ಈತನ ವಿರುದ್ಧ Mulkhi Police Station ವ್ಯಾಪ್ತಿಯಲ್ಲಿ 2008ರಲ್ಲಿ ದಾಖಲಾಗಿದ್ದ ಪ್ರವೀಣ್ ಎಂಬವರ ಅಪಹರಣ, ದರೋಡೆ ಹಾಗೂ ಕೊಲೆ ಪ್ರಕರಣದಲ್ಲಿ ಮಾನ್ಯ Karnataka High Court ದಿನಾಂಕ 28-02-2020ರಂದು ಜೀವಾವಧಿ ಶಿಕ್ಷೆ ವಿಧಿಸಿದೆ. ಅದಲ್ಲದೆ Karkala Police Station ವ್ಯಾಪ್ತಿಯಲ್ಲಿ 2008ರಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯವು 3 ವರ್ಷಗಳ ಶಿಕ್ಷೆ ವಿಧಿಸಿದೆ.
ಬಂಧಿತನ ವಿರುದ್ಧ ಇನ್ನೂ 13 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದ್ದು, ವಿವಿಧ ನ್ಯಾಯಾಲಯಗಳಿಂದ ದಸ್ತಗಿರಿ ವಾರೆಂಟ್ಗಳು ಜಾರಿಗೊಂಡಿವೆ. ಅಲ್ಲದೆ 05 ಪ್ರಕರಣಗಳಲ್ಲಿ ನ್ಯಾಯಾಲಯವು ಎಲ್.ಪಿ.ಸಿ (Long Pending Case) ಎಂದು ಘೋಷಿಸಿರುವುದು ತಿಳಿದುಬಂದಿದೆ.
ಸುದೀರ್ಘ ಅವಧಿಯಿಂದ ಕಾನೂನು ಚೌಕಟ್ಟಿನಿಂದ ತಪ್ಪಿಸಿಕೊಳ್ಳುತ್ತಿದ್ದ ಆರೋಪಿ ಮೇಲೆ ವಿಶೇಷ ನಿಗಾವಹಿಸಿ ಸೂಕ್ತ ಮಾಹಿತಿ ಸಂಗ್ರಹಿಸಿದ ಪೊಲೀಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಹಿರಿಯ ಅಧಿಕಾರಿಗಳು ಶ್ಲಾಘಿಸಿದ್ದಾರೆ.
Trending
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
- ಪುತ್ತೂರಿನ ಸಾನ್ವಿತಾ ಎಂ. ರೈ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆ
- ಗ್ರೀನ್ ವ್ಯೂ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
- ಮಂಗಳೂರಿನ ಸಿಟಿ ಸೆಂಟರ್ KFC ಮಳಿಗೆಯಲ್ಲಿ 9 ತಿಂಗಳ ಹಿಂದಿನ ಮಾಂಸ ಪತ್ತೆ: ಆರೋಗ್ಯಾಧಿಕಾರಿಗಳಿಂದ ಮಳಿಗೆಗೆ ಬೀಗ
- ತಲ್ಲೂರಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಸಿಹಿ ವಿತರಣೆ, ಶೇ.90 ಅಂಕ ಗಳಿಸಿದ ಸ್ಪಂದಿತ ಪೂಜಾರಿಗೆ ಡಾ. ರವೀಂದ್ರ ತಲ್ಲೂರು ಅವರಿಂದ ಸನ್ಮಾನ
- ಡಿ.ಕೆ. ಯೂಸ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ನ ನೂತನ ಕಾನೂನು ಸಲಹೆಗಾರರಾಗಿ ಶ್ರೀ ಸಿನಾನ್ ಸಿದ್ದೀಕ್ ನೇಮಕ

