ತುಮಕೂರು: ಕುಣಿಗಲ್ ಪೊಲೀಸ್ ಠಾಣೆ ಪಿಎಸ್ಐ, ಬೇಗೂರು ಗ್ರಾಮ ಪಂಚಾಯತ್ ಸದಸ್ಯನಿಗೆ ಕಪಾಳ ಮೋಕ್ಷ ಮಾಡಿರುವ ಆರೋಪ ಕೇಳಿಬಂದಿದೆ.
ಬೇಗೂರಿನ ನಾರಾಯಣ್ ಎನ್ನುವವರನ್ನು ಪೊಲೀಸರು ಕುಣಿಗಲ್ ಠಾಣೆಗೆ ಕರೆದುಕೊಂಡು ಹೋಗಿದ್ದರು. ಈ ಬಗ್ಗೆ ವಿಚಾರಿಸಲು ಬೇಗೂರು ಗ್ರಾಮ ಪಂಚಾಯತ್ ಸದಸ್ಯ ನಾಗಾನಂದ್ ಠಾಣೆಗೆ ತೆರಳಿದ್ದರು. ಈ ವೇಳೆ ಅನುಮತಿ ಇಲ್ಲದೆ ಒಳಗೆ ಹೇಗೆ ಪ್ರವೇಶಿಸಿದೆ ಎಂದು ಸಿಟ್ಟಿಗೆದ್ದ ಪಿಎಸ್ಐ ಲಕ್ಷ್ಮಣ್, ಏಕವಚನದಲ್ಲಿ ನಿಂದಿಸಿ ಕಪಾಳಮೋಕ್ಷ ಮಾಡಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬೇಗೂರು ಗ್ರಾಮಸ್ಥರು ಕುಣಿಗಲ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದು, ಕೂಡಲೇ ಪಿಎಸ್ಐ ಲಕ್ಷ್ಮಣ್ ಅಮಾನತು ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ.