ಮಂಗಳೂರು: ಅಪಾರ್ಟ್ಮೆಂಟ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವರು ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ದೇರೆಬೈಲ್ ಕೊಂಚಾಡಿಯಲ್ಲಿ ಸಂಭವಿಸಿದೆ.
ಜಿತೇಂದ್ರ (44) ಮೃತಪಟ್ಟವರು. ಅವರು ನೀರುಮಾರ್ಗದ ಗುತ್ತಿಗೆದಾರ ಅವೀನ್ ಅಮೀನ್ ಅವರೊಂದಿಗೆ ಹಳೆಯ ಫೈಬರ್ಶಿಟ್ ಬದಲಿ ಮಾಡುವ, ಕಬ್ಬಿನದ ಶೀಟ್ಗಳಿಗೆ ಅಳವಡಿಸುವ ಕೆಲಸ ಮಾಡುತ್ತಿದ್ದರು.
ಶನಿವಾರ ಕೆಲಸ ಮಾಡುತ್ತಿದ್ದಾಗ ಮಧ್ಯಾಹ್ನ ಕೆಳಗೆ ಬಿದ್ದಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಿ ಜಿತೇಂದ್ರ ಮೃತಪಟ್ಟಿದ್ದರು. ಘಟನೆಗೆ ಗುತ್ತಿಗೆದಾರರು ನಿರ್ಲಕ್ಷ್ಯ ವಹಿಸಿರುವುದೇ ಕಾರಣ ಎಂದು ಕಾವೂರು ಪೊಲೀಸರಿಗೆ ದೂರು ನೀಡಲಾಗಿದೆ.