ಮಂಗಳೂರು: ಬಹು ಚರ್ಚೆಗೆ ಗ್ರಾಸವಾಗಿದ್ದ ಲೇಡಿಹಿಲ್ ಸರ್ಕಲ್ಗೆ ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತವೆಂದು ಮರುನಾಮಕರಣ ಮಾಡಲಾಯಿತು. ಕಳೆದ ಏಳೆಂಟು ವರ್ಷಗಳಿಂದ ನಗರದ ಲೇಡಿಹಿಲ್ ವೃತ್ತಕ್ಕೆ ಬ್ರಹ್ಮಶ್ರೀ ನಾರಾಯಣ ಗುರು ವೃತ್ತವೆಂದು ಹೆಸರಿಡಬೇಕೆಂಬ ಒತ್ತಾಯ ಕೇಳಿ ಬಂದಿತ್ತು. ಆದರೆ ಇದಕ್ಕೆ ಸಾಕಷ್ಟು ವಿರೋಧವೂ ವ್ಯಕ್ತವಾಗಿತ್ತು. ಈಗ ಜಿಲ್ಲಾಡಳಿತ ಈ ವೃತ್ತಕ್ಕೆ ಮರು ನಾಮಕರಣ ಮಾಡಿತು.
ಲೇಡಿಹಿಲ್ ಸರ್ಕಲ್ಗೆ ನಾರಾಯಣ ಗುರುಗಳ ಹೆಸರಿಡಬೇಕೆಂದು ಕೆಲವೊಂದು ಸಂಘಟನೆಗಳು ಜನಪ್ರತಿನಿಧಿಗಳಿಗೆ ಒತ್ತಡ ಹಾಕುತ್ತಲೇ ಇದ್ದರು. ಆದರೆ ಇದಕ್ಕೆ ಸಾಕಷ್ಟು ವಿರೋಧವೂ ಕೇಳಿ ಬಂದಿತ್ತು. ಈ ನಡುವೆ ಅನಧಿಕೃತವಾಗಿ ನಾರಾಯಣ ಗುರುಗಳ ವೃತ್ತವೆಂದು ನಾಮಫಲಕವೂ ರಾರಾಜಿಸಿದ್ದವು. ಆದರೆ ಇದೀಗ ರಾಜ್ಯ ಸರಕಾರದ ಆದೇಶದನ್ವಯ ದಕ್ಷಿಣ ಕನ್ನಡ ಜಿಲ್ಲಾಡಳಿತ ಲೇಡಿಹಿಲ್ ಸರ್ಕಲ್ಗೆ ಅಧಿಕೃತವಾಗಿ ಬ್ರಹ್ಮಶ್ರೀ ನಾರಾಯಣ ಗುರು ವೃತ್ತವೆಂದು ಮರುನಾಮಕರಣ ಮಾಡಿದೆ.