ವಿಟ್ಲ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ- ಕಾಸರಗೋಡು ರಸ್ತೆಯಲ್ಲಿ ನಡೆದಿದೆ.
ಮೃತವ್ಯಕ್ತಿ ನಾರಾಯಣ ಕೊಡಂಗೆ ಎಂದು ಗುರುತಿಸಲಾಗಿದೆ.
ಮೃತವ್ಯಕ್ತಿಯ ಗುರುತು ಪತ್ತೆಯಾಗದಿದ್ದ ಕಾರಣ ವಿಟ್ಲ ಪೊಲೀಸರು ಸಾರ್ವಜನಿಕರಲ್ಲಿ ವ್ಯಕ್ತಿಯ ಗುರುತಿಗಾಗಿ ಮನವಿ ಮಾಡಿದ್ದು, ಸದ್ಯ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಮೃತ ವ್ಯಕ್ತಿಯ ಮನೆಯವರು ಆಸ್ಪತ್ರೆಗೆ ಬರುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮೃತ ವ್ಯಕ್ತಿಯನ್ನು ಕಡಂಬು ನಿವಾಸಿ ನಾರಾಯಣ ಕೊಡಂಗೆ ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.