Friday, March 29, 2024
spot_img
More

    Latest Posts

    ಮಂಗಳೂರು: ಮೀನು ಸಂಸ್ಕರಣ ಫ್ಯಾಕ್ಟರಿಯಲ್ಲಿ ದುರಂತ – ಕಾರ್ಖಾನೆಗೆ ಬೀಗ

    ಮಂಗಳೂರು: ಐದು ಮಂದಿಯ ಕಾರ್ಮಿಕರ ಸಾವಿಗೆ ಕಾರಣವಾದ ಎಂಎಸ್ಇಝಡ್‌ ನಲ್ಲಿರುವ ಮುಂಬೈ ಮೂಲದ ಶ್ರೀ ಉಲ್ಕಾ ಫಿಶ್‌ ಮೀಲ್‌ ಕಾರ್ಖಾನೆಗೆ ಪೊಲೀಸರು ಬೀಗ ಹಾಕಿದ್ದಾರೆ. ಈ ದುರಂತ ಪ್ರಕರಣಕ್ಕೆ ಸಂಬಂಧಿಸಿ ಕಂಪೆನಿಯ ಪ್ರೊಡಕ್ಷನ್ ಮ್ಯಾನೇಜರ್ ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದ್ದಾರೆ.


    ಕಂಪೆನಿಯ ಪ್ರೊಡಕ್ಷನ್ ಮ್ಯಾನೇಜರ್ ರೂಬಿ ಜೋಸೆಫ್, ಏರಿಯಾ ಮ್ಯಾನೇಜರ್ ಕುಬೇರ್ ಗಾಡೆ, ಸೂಪರ್ ವೈಸರ್ ಮುಹಮ್ಮದ್ ಅನ್ವರ್ ಹಾಗೂ ಕಂಪೆನಿಯ ಕಾರ್ಮಿಕರ ಆಗುಹೋಗುಗಳನ್ನು ನೋಡಿಕೊಳ್ಳುತ್ತಿದ್ದ ಉಳ್ಳಾಲ ಆಝಾದ್ ನಗರ ನಿವಾಸಿ ಫಾರೂಕ್ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss