ಬೆಂಗಳೂರು : ಅದೃಷ್ಟದ ಪಚ್ಚೆ ಕಲ್ಲನ್ನು ಕಡಿಮೆ ಬೆಲೆಗೆ ಖರೀದಿಸಿ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಬಹುದು ಎಂದು ಆಮಿಷವೊಡ್ಡಿ ಸ್ನೇಹಿತ ಉದ್ಯಮಿಯೊಬ್ಬರಿಂದ ₹52 ಲಕ್ಷ ಪಡೆದು ಅವರ ಸ್ನೇಹಿತರೇ ವಂಚಿಸಿದ್ದಾರೆ.ನಗರದ ರಿಚ್ಮಂಡ್ ಟೌನ್ ನಿವಾಸಿ ಶೌಕತ್ ಆಲಿ ವಂಚನೆಗೆ ಒಳಗಾಗಿದ್ದು, ಸಂತ್ರಸ್ತ ನೀಡಿದ ದೂರಿನ ಮೇರೆಗೆ ಆಲಿ ಸ್ನೇಹಿತರಾದ ಅಶ್ಪಾಕ್ ಬೇಗ್, ಶಾನವಾಜ್ ಮಿರ್ಜಾ ಹಾಗೂ ಸಾಜಿದ್ ವಿರುದ್ಧ ಅಶೋಕ ನಗರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ ಒಂದೂವರೆ ದಶಕಗಳಿಂದ ಆಲಿ ಹಾಗೂ ಆರೋಪಿಗಳು ಸ್ನೇಹಿತರಾಗಿದ್ದು, ಈ ಗೆಳೆತನದಲ್ಲಿ ಪರಸ್ಪರ ಹಣಕಾಸು ವ್ಯವಹಾರ ಸಹ ನಡೆದಿತ್ತು. ಹೀಗಿರುವಾಗ ಕಳೆದ ಏಪ್ರಿಲ್ನಲ್ಲಿ ಆಲಿಗೆ ಕರೆ ಮಾಡಿದ ಸ್ನೇಹಿತರು, ನಮಗೆ ಪರಿಚಯವಿರುವ ವ್ಯಕ್ತಿ ಬಳಿ ಬೆಲೆ ಬಾಳುವ ಪಚ್ಚೆ ಕಲ್ಲು ಇದೆ. ಅದನ್ನು ಆತ ₹52 ಲಕ್ಷಕ್ಕೆ ಮಾರುತ್ತಿದ್ದಾನೆ. ನಾವೇ ಖರೀದಿಸಿದರೆ ಅದನ್ನು ₹1 ಕೋಟಿಗೆ ಮಾರಾಟ ಮಾಡಬಹುದು ಎಂದು ಹೇಳಿದ್ದರು. ಲಾಭದಾಸೆಗೆ ಆಲಿ ಸಹ ಡೀಲ್ಗೆ ಸಮ್ಮತಿ ಸೂಚಿಸಿದ್ದರು. ಆನಂತರ ಹಂತ ಹಂತವಾಗಿ ಆಲಿಯಿಂದ ₹52 ಲಕ್ಷವನ್ನು ವಸೂಲಿ ಮಾಡಿದ ಆರೋಪಿಗಳು, ಬಳಿಕ ಪಚ್ಚೆ ಕಲ್ಲು ಕೊಡಲು ಏನೇನೂ ಸಬೂಬು ಹೇಳುತ್ತಿದ್ದರು. ಕೊನೆಗೆ ಪಚ್ಚೆ ಕಲ್ಲು ತೆಗೆದುಕೊಂಡು ಆಲಿ ಮನೆಗೆ ಹೋಗಿದ್ದ ಆರೋಪಿಗಳು, ಈ ಕಲ್ಲನ್ನು ಖರೀದಿಸಲು ವೈಟ್ಫೀಲ್ಡ್ಗೆ ಸ್ವಾಮೀಜಿಯೊಬ್ಬರು ಬಂದಿದ್ದಾರೆ ಎಂದು ಹೇಳಿ ಆಲಿಯನ್ನು ಹೊರಗೆ ಕರೆ ತಂದಿದ್ದರು. ನಂತರ ‘ಚೀನಾದ ಉದ್ಯಮಿ ಖರೀದಿಸುತ್ತಾರೆ. ಸದ್ಯ ರಾಜಸ್ಥಾನಕ್ಕೆ ವಿದೇಶಿ ಉದ್ಯಮಿ ಬಂದಿದ್ದು, ಅಲ್ಲಿ ಹೋಗಿ ಭೇಟಿ ಮಾಡಿ’ ಎಂದು ಸ್ವಾಮೀಜಿ ಹೇಳಿ ಕಳುಹಿಸಿದ್ದರು. ಇದನ್ನು ನಂಬಿದ ಉದ್ಯಮಿ, ಆರೋಪಿಗಳ ಜೊತೆಯಲ್ಲಿ ರಾಜಸ್ಥಾನಕ್ಕೆ ಪಚ್ಚೆ ಕಲ್ಲು ತೆಗೆದುಕೊಂಡು ಹೋಗಿದ್ದರು. ಅಲ್ಲಿ ಒಂದು ತಿಂಗಳು ಹೋಟೆಲ್ನಲ್ಲಿ ಉಳಿದುಕೊಂಡು ಕೊನೆಗೊಂದು ದಿನ ಪಚ್ಚೆ ಕಲ್ಲು ಮಾರಾಟ ಮಾಡಿ ಹಣವನ್ನು ತೆಗೆದುಕೊಂಡು ಬರುವುದಾಗಿ ಉದ್ಯಮಿಗೆ ಹೇಳಿ ಬೆಂಗಳೂರಿಗೆ ಕಳುಹಿಸಿದ್ದರು. ಬಳಿಕ ಆರೋಪಿಗಳು ಮೊಬೈಲ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದರು. ಅಂತಿಮವಾಗಿ ತಾನು ಮೋಸ ಹೋಗಿರುವುದು ಅರಿವಾಗಿ ಆಲಿ ವಿಶ್ವಾಸ ದ್ರೋಹ ಮಾಡಿದ ಸ್ನೇಹಿತರ ವಿರುದ್ದ ಪೊಲೀಸ್ ಮೆಟ್ಟಲೇರಿದ್ದಾರೆ.
Trending
- ರಾಜಧಾನಿಯಲ್ಲಿ ಡ್ರಗ್ಸ್ ದಂಧೆ ಬಯಲು: ಮೂವರು ವಿದೇಶಿಗರು ಸೇರಿ ಎಂಟು ಮಂದಿ ಅರೆಸ್ಟ್
- ಕಾವೂರು ಬಂಟರ ಭವನ ಉದ್ಘಾಟನೆಗೆ ಸಿದ್ಧತೆ ಜನವರಿ 20, 2027ರಂದು ಭವ್ಯ ಕಾರ್ಯಕ್ರಮ — ಸಂಘಟಿತ ಕಾರ್ಯಕ್ಕೆ ಆನಂದ ಶೆಟ್ಟಿ ಅಡ್ಯಾರ್ ಕರೆ
- ಮೇ 30ರಂದು ಜಾಕೆ ಮಾಧವ ಗೌಡ ಅಧ್ಯಕ್ಷತೆಯಲ್ಲಿ ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಸಂಘಟನೆಗೆ ಹೊಸ ಚೈತನ್ಯ ತುಂಬುವ ಮಹತ್ವದ ಸಭೆ
- ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷರಾಗಿ ಶ್ರೀ ಇಕ್ಬಲ್ ಅಹಮದ್ ಮುಲ್ಕಿ ನೇಮಕ
- ಉರ್ವ ಶೇಡಿಗುರಿಯಲ್ಲಿ ಬಹು ಮಹಡಿ ಕಟ್ಟಡ ಕಾಮಗಾರಿಯಿಂದ ಹತ್ತಿರದ ಮನೆ ಅವರಣ ಕುಸಿತ : ಸ್ಥಳಕ್ಕೆ ಧಾವಿಸಿ ನೆರವಾದ ಜೆಡಿಎಸ್ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು
- ತುಳುನಾಡ ರಕ್ಷಣಾ ವೇದಿಕೆ ನಗರ ಕಾರ್ಯದ್ಯಕ್ಷ ಕ್ಲೀಟಸ್ ಲೋಬೊ ಕ್ಯಾಥೋಲಿಕ್ ಸಭಾ ಎಪಿಸ್ಕೋಪಲ್ ಸಿಟಿ ವರಾಡೊಗೆ ಹೊಸ ಅಧ್ಯಕ್ಷರಾಗಿ ಆಯ್ಕೆ
- ದಕ್ಷಿಣ ಕನ್ನಡ ಜೆಡಿಎಸ್ ಜಿಲ್ಲಾ ಮತ್ತೋರ್ವ ಕಾರ್ಯಾಧ್ಯಕ್ಷರಾಗಿ ವಸಂತ್ ಪೂಜಾರಿ ನೇಮಕ
- ಜೆಡಿಎಸ್ ರಾಜ್ಯ ಮೀನುಗಾರರ ಘಟಕದ ಅಧ್ಯಕ್ಷರಾಗಿ ರತ್ನಾಕರ ಸುವರ್ಣ ಮರು ಆಯ್ಕೆ

