ಬೆಂಗಳೂರು : ಅದೃಷ್ಟದ ಪಚ್ಚೆ ಕಲ್ಲನ್ನು ಕಡಿಮೆ ಬೆಲೆಗೆ ಖರೀದಿಸಿ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಬಹುದು ಎಂದು ಆಮಿಷವೊಡ್ಡಿ ಸ್ನೇಹಿತ ಉದ್ಯಮಿಯೊಬ್ಬರಿಂದ ₹52 ಲಕ್ಷ ಪಡೆದು ಅವರ ಸ್ನೇಹಿತರೇ ವಂಚಿಸಿದ್ದಾರೆ.ನಗರದ ರಿಚ್ಮಂಡ್ ಟೌನ್ ನಿವಾಸಿ ಶೌಕತ್ ಆಲಿ ವಂಚನೆಗೆ ಒಳಗಾಗಿದ್ದು, ಸಂತ್ರಸ್ತ ನೀಡಿದ ದೂರಿನ ಮೇರೆಗೆ ಆಲಿ ಸ್ನೇಹಿತರಾದ ಅಶ್ಪಾಕ್ ಬೇಗ್, ಶಾನವಾಜ್ ಮಿರ್ಜಾ ಹಾಗೂ ಸಾಜಿದ್ ವಿರುದ್ಧ ಅಶೋಕ ನಗರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ ಒಂದೂವರೆ ದಶಕಗಳಿಂದ ಆಲಿ ಹಾಗೂ ಆರೋಪಿಗಳು ಸ್ನೇಹಿತರಾಗಿದ್ದು, ಈ ಗೆಳೆತನದಲ್ಲಿ ಪರಸ್ಪರ ಹಣಕಾಸು ವ್ಯವಹಾರ ಸಹ ನಡೆದಿತ್ತು. ಹೀಗಿರುವಾಗ ಕಳೆದ ಏಪ್ರಿಲ್ನಲ್ಲಿ ಆಲಿಗೆ ಕರೆ ಮಾಡಿದ ಸ್ನೇಹಿತರು, ನಮಗೆ ಪರಿಚಯವಿರುವ ವ್ಯಕ್ತಿ ಬಳಿ ಬೆಲೆ ಬಾಳುವ ಪಚ್ಚೆ ಕಲ್ಲು ಇದೆ. ಅದನ್ನು ಆತ ₹52 ಲಕ್ಷಕ್ಕೆ ಮಾರುತ್ತಿದ್ದಾನೆ. ನಾವೇ ಖರೀದಿಸಿದರೆ ಅದನ್ನು ₹1 ಕೋಟಿಗೆ ಮಾರಾಟ ಮಾಡಬಹುದು ಎಂದು ಹೇಳಿದ್ದರು. ಲಾಭದಾಸೆಗೆ ಆಲಿ ಸಹ ಡೀಲ್ಗೆ ಸಮ್ಮತಿ ಸೂಚಿಸಿದ್ದರು. ಆನಂತರ ಹಂತ ಹಂತವಾಗಿ ಆಲಿಯಿಂದ ₹52 ಲಕ್ಷವನ್ನು ವಸೂಲಿ ಮಾಡಿದ ಆರೋಪಿಗಳು, ಬಳಿಕ ಪಚ್ಚೆ ಕಲ್ಲು ಕೊಡಲು ಏನೇನೂ ಸಬೂಬು ಹೇಳುತ್ತಿದ್ದರು. ಕೊನೆಗೆ ಪಚ್ಚೆ ಕಲ್ಲು ತೆಗೆದುಕೊಂಡು ಆಲಿ ಮನೆಗೆ ಹೋಗಿದ್ದ ಆರೋಪಿಗಳು, ಈ ಕಲ್ಲನ್ನು ಖರೀದಿಸಲು ವೈಟ್ಫೀಲ್ಡ್ಗೆ ಸ್ವಾಮೀಜಿಯೊಬ್ಬರು ಬಂದಿದ್ದಾರೆ ಎಂದು ಹೇಳಿ ಆಲಿಯನ್ನು ಹೊರಗೆ ಕರೆ ತಂದಿದ್ದರು. ನಂತರ ‘ಚೀನಾದ ಉದ್ಯಮಿ ಖರೀದಿಸುತ್ತಾರೆ. ಸದ್ಯ ರಾಜಸ್ಥಾನಕ್ಕೆ ವಿದೇಶಿ ಉದ್ಯಮಿ ಬಂದಿದ್ದು, ಅಲ್ಲಿ ಹೋಗಿ ಭೇಟಿ ಮಾಡಿ’ ಎಂದು ಸ್ವಾಮೀಜಿ ಹೇಳಿ ಕಳುಹಿಸಿದ್ದರು. ಇದನ್ನು ನಂಬಿದ ಉದ್ಯಮಿ, ಆರೋಪಿಗಳ ಜೊತೆಯಲ್ಲಿ ರಾಜಸ್ಥಾನಕ್ಕೆ ಪಚ್ಚೆ ಕಲ್ಲು ತೆಗೆದುಕೊಂಡು ಹೋಗಿದ್ದರು. ಅಲ್ಲಿ ಒಂದು ತಿಂಗಳು ಹೋಟೆಲ್ನಲ್ಲಿ ಉಳಿದುಕೊಂಡು ಕೊನೆಗೊಂದು ದಿನ ಪಚ್ಚೆ ಕಲ್ಲು ಮಾರಾಟ ಮಾಡಿ ಹಣವನ್ನು ತೆಗೆದುಕೊಂಡು ಬರುವುದಾಗಿ ಉದ್ಯಮಿಗೆ ಹೇಳಿ ಬೆಂಗಳೂರಿಗೆ ಕಳುಹಿಸಿದ್ದರು. ಬಳಿಕ ಆರೋಪಿಗಳು ಮೊಬೈಲ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದರು. ಅಂತಿಮವಾಗಿ ತಾನು ಮೋಸ ಹೋಗಿರುವುದು ಅರಿವಾಗಿ ಆಲಿ ವಿಶ್ವಾಸ ದ್ರೋಹ ಮಾಡಿದ ಸ್ನೇಹಿತರ ವಿರುದ್ದ ಪೊಲೀಸ್ ಮೆಟ್ಟಲೇರಿದ್ದಾರೆ.
Trending
- ಅಸಮಾನತೆ ಅಸ್ಪೃಶ್ಯತೆ ವಿರುದ್ಧ ಅಂಬೇಡ್ಕರ್ ಹೋರಾಟ –ತರೀಕೆರೆ ಎನ್ ವೆಂಕಟೇಶ್
- ಬೊಂಡಾಲ ಪ್ರಶಸ್ತಿಗೆ ಕಲಾವಿದ ಲಕ್ಷ್ಮಣ ಶೆಟ್ಟಿ ತಾರೆಮಾರ್ ಆಯ್ಕೆಫೆಬ್ರವರಿ 20ರಂದು ಪ್ರಶಸ್ತಿ ಪ್ರದಾನ
- ಕಾರ್ಕಳದಲ್ಲಿ ಅಕ್ರಮ ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ8 ಮಂದಿ ಬಂಧನ – ಮೂವರು ಪರಾರಿ
- ಮಂಗಳೂರು | ತುಳು ಚಿತ್ರರಂಗ–ರಂಗಭೂಮಿ ಕಲಾವಿದರ ‘ದಶ ಯಾತ್ರೆ’ ಸಂಭ್ರಮಕ್ಕೆ ವೇದಿಕೆ ಸಿದ್ಧ
- ಸಾಮಾಜಿಕ ಮಾಧ್ಯಮ ಪೋಸ್ಟ್ ಪ್ರಕರಣಗಳು: ಏಕಾಏಕಿ ಎಫ್ಐಆರ್–ಬಂಧನಕ್ಕೆ ಬ್ರೇಕ್ ರಾಜ್ಯ ಪೊಲೀಸರಿಗೆ ಡಿಜಿಪಿ ಎಂ.ಎ. ಸಲೀಮ್ ಹೊಸ ಮಾರ್ಗಸೂಚಿ
- ದಲಿತ ಮಹಿಳೆಯ ಮೇಲೆ ಜಾತಿ ನಿಂದನೆ, ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ಮಣಿಪಾಲ ಸೌಹಾರ್ದ ಸೊಸೈಟಿ ಮುಖ್ಯಸ್ಥ ಸಂದೀಪ್ ಕೃಷ್ಣ ಪೂಜಾರಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ಮತ್ತು ತುಳುನಾಡ ರಕ್ಷಣಾ ವೇದಿಕೆ ಜಂಟಿ ಪತ್ರಿಕಾಗೋಷ್ಠಿ
- ಸುಂಕದಕಟ್ಟೆ – ನವರಂಗ ಕಾಂಪೌಂಡ್ ಬಳಿ ರಸ್ತೆ–ಚರಂಡಿ ಸಮಸ್ಯೆ: ತಕ್ಷಣ ಕಾಮಗಾರಿ ಆರಂಭಿಸಲು ಎಸ್ ಡಿ ಪಿ ಐ ಮುಖಂಡ ಅಬ್ದುಲ್ ಹಮೀದ್ ಕೊಳಂಬೆ ಆಗ್ರಹ
- ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮೂವರಿಗೆ ವಿಧಿಸಿದ್ದ ಗಲ್ಲು ಶಿಕ್ಷೆ ಕಾಯಂಗೊಳಿಸಿದ ಹೈಕೋರ್ಟ್, ಶಿಕ್ಷೆ ಕಡಿಮೆ ಮಾಡಿದರೆ ಸಮಾಜಕ್ಕೆ ತಪ್ಪು ಸಂದೇಶ – ತೀಕ್ಷ್ಣ ಅಭಿಪ್ರಾಯ

