ಬೆಂಗಳೂರು : ಅದೃಷ್ಟದ ಪಚ್ಚೆ ಕಲ್ಲನ್ನು ಕಡಿಮೆ ಬೆಲೆಗೆ ಖರೀದಿಸಿ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಬಹುದು ಎಂದು ಆಮಿಷವೊಡ್ಡಿ ಸ್ನೇಹಿತ ಉದ್ಯಮಿಯೊಬ್ಬರಿಂದ ₹52 ಲಕ್ಷ ಪಡೆದು ಅವರ ಸ್ನೇಹಿತರೇ ವಂಚಿಸಿದ್ದಾರೆ.ನಗರದ ರಿಚ್ಮಂಡ್ ಟೌನ್ ನಿವಾಸಿ ಶೌಕತ್ ಆಲಿ ವಂಚನೆಗೆ ಒಳಗಾಗಿದ್ದು, ಸಂತ್ರಸ್ತ ನೀಡಿದ ದೂರಿನ ಮೇರೆಗೆ ಆಲಿ ಸ್ನೇಹಿತರಾದ ಅಶ್ಪಾಕ್ ಬೇಗ್, ಶಾನವಾಜ್ ಮಿರ್ಜಾ ಹಾಗೂ ಸಾಜಿದ್ ವಿರುದ್ಧ ಅಶೋಕ ನಗರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ ಒಂದೂವರೆ ದಶಕಗಳಿಂದ ಆಲಿ ಹಾಗೂ ಆರೋಪಿಗಳು ಸ್ನೇಹಿತರಾಗಿದ್ದು, ಈ ಗೆಳೆತನದಲ್ಲಿ ಪರಸ್ಪರ ಹಣಕಾಸು ವ್ಯವಹಾರ ಸಹ ನಡೆದಿತ್ತು. ಹೀಗಿರುವಾಗ ಕಳೆದ ಏಪ್ರಿಲ್ನಲ್ಲಿ ಆಲಿಗೆ ಕರೆ ಮಾಡಿದ ಸ್ನೇಹಿತರು, ನಮಗೆ ಪರಿಚಯವಿರುವ ವ್ಯಕ್ತಿ ಬಳಿ ಬೆಲೆ ಬಾಳುವ ಪಚ್ಚೆ ಕಲ್ಲು ಇದೆ. ಅದನ್ನು ಆತ ₹52 ಲಕ್ಷಕ್ಕೆ ಮಾರುತ್ತಿದ್ದಾನೆ. ನಾವೇ ಖರೀದಿಸಿದರೆ ಅದನ್ನು ₹1 ಕೋಟಿಗೆ ಮಾರಾಟ ಮಾಡಬಹುದು ಎಂದು ಹೇಳಿದ್ದರು. ಲಾಭದಾಸೆಗೆ ಆಲಿ ಸಹ ಡೀಲ್ಗೆ ಸಮ್ಮತಿ ಸೂಚಿಸಿದ್ದರು. ಆನಂತರ ಹಂತ ಹಂತವಾಗಿ ಆಲಿಯಿಂದ ₹52 ಲಕ್ಷವನ್ನು ವಸೂಲಿ ಮಾಡಿದ ಆರೋಪಿಗಳು, ಬಳಿಕ ಪಚ್ಚೆ ಕಲ್ಲು ಕೊಡಲು ಏನೇನೂ ಸಬೂಬು ಹೇಳುತ್ತಿದ್ದರು. ಕೊನೆಗೆ ಪಚ್ಚೆ ಕಲ್ಲು ತೆಗೆದುಕೊಂಡು ಆಲಿ ಮನೆಗೆ ಹೋಗಿದ್ದ ಆರೋಪಿಗಳು, ಈ ಕಲ್ಲನ್ನು ಖರೀದಿಸಲು ವೈಟ್ಫೀಲ್ಡ್ಗೆ ಸ್ವಾಮೀಜಿಯೊಬ್ಬರು ಬಂದಿದ್ದಾರೆ ಎಂದು ಹೇಳಿ ಆಲಿಯನ್ನು ಹೊರಗೆ ಕರೆ ತಂದಿದ್ದರು. ನಂತರ ‘ಚೀನಾದ ಉದ್ಯಮಿ ಖರೀದಿಸುತ್ತಾರೆ. ಸದ್ಯ ರಾಜಸ್ಥಾನಕ್ಕೆ ವಿದೇಶಿ ಉದ್ಯಮಿ ಬಂದಿದ್ದು, ಅಲ್ಲಿ ಹೋಗಿ ಭೇಟಿ ಮಾಡಿ’ ಎಂದು ಸ್ವಾಮೀಜಿ ಹೇಳಿ ಕಳುಹಿಸಿದ್ದರು. ಇದನ್ನು ನಂಬಿದ ಉದ್ಯಮಿ, ಆರೋಪಿಗಳ ಜೊತೆಯಲ್ಲಿ ರಾಜಸ್ಥಾನಕ್ಕೆ ಪಚ್ಚೆ ಕಲ್ಲು ತೆಗೆದುಕೊಂಡು ಹೋಗಿದ್ದರು. ಅಲ್ಲಿ ಒಂದು ತಿಂಗಳು ಹೋಟೆಲ್ನಲ್ಲಿ ಉಳಿದುಕೊಂಡು ಕೊನೆಗೊಂದು ದಿನ ಪಚ್ಚೆ ಕಲ್ಲು ಮಾರಾಟ ಮಾಡಿ ಹಣವನ್ನು ತೆಗೆದುಕೊಂಡು ಬರುವುದಾಗಿ ಉದ್ಯಮಿಗೆ ಹೇಳಿ ಬೆಂಗಳೂರಿಗೆ ಕಳುಹಿಸಿದ್ದರು. ಬಳಿಕ ಆರೋಪಿಗಳು ಮೊಬೈಲ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದರು. ಅಂತಿಮವಾಗಿ ತಾನು ಮೋಸ ಹೋಗಿರುವುದು ಅರಿವಾಗಿ ಆಲಿ ವಿಶ್ವಾಸ ದ್ರೋಹ ಮಾಡಿದ ಸ್ನೇಹಿತರ ವಿರುದ್ದ ಪೊಲೀಸ್ ಮೆಟ್ಟಲೇರಿದ್ದಾರೆ.
Trending
- ತಾಳಿಪಾಡಿ ರಾಜಕಾಲುವೆಗೆ ₹30 ಲಕ್ಷದ ತಡೆಗೋಡೆ ಕಾಮಗಾರಿಗೆ ಚಾಲನೆ , ಕೃತಕ ನೆರೆ ಸಮಸ್ಯೆ ನಿವಾರಣೆಗೆ ಶಾಶ್ವತ ಪರಿಹಾರಕ್ಕೆ ಕ್ರಮ : ವೇದವ್ಯಾಸ ಕಾಮತ್
- ಒಡ್ಡೂರು ಪಾರ್ಮ್ಸ್ನಲ್ಲಿ ಬಿಜೆಪಿ ಪ್ರಶಿಕ್ಷಣ ಮಹಾಭಿಯಾನಕ್ಕೆ ಚಾಲನೆ : ಕಾರ್ಯಕರ್ತರ ರೂಪುಗೊಳಿಸುವಲ್ಲಿ ಇಂತಹ ವರ್ಗಗಳ ಪಾತ್ರ ಮಹತ್ವದ್ದು : ಬ್ರಿಜೇಶ್ ಚೌಟ
- ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ಪ್ರಶಿಕ್ಷಣ ಮಹಾಭಿಯಾನ ಸಮಾರೋಪ ವ್ಯಕ್ತಿಗಿಂತ ಪಕ್ಷ, ಪಕ್ಷಕ್ಕಿಂತ ದೇಶ ಮುಖ್ಯ” — ನಳಿನ್ ಕುಮಾರ್ ಕಟೀಲ್
- ಕನಕದಾಸರ ಸಮಗ್ರ ಅನುವಾದ ಯೋಜನೆ: ತುಳು ಕೃತಿಗಳ ಬಿಡುಗಡೆ
- ತುಳುನಾಡ ರಕ್ಷಣಾ ವೇದಿಕೆ ಕಚೇರಿಗೆ ಜೆಡಿಎಸ್ ಸುಳ್ಯ ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ ಭೇಟಿ ಸಂಘಟನಾ ವಿಚಾರಗಳ ಕುರಿತು ಸಂವಾದ
- ಕ್ಯಾಂಟಿನ್ನಲ್ಲಿ ಅಕ್ರಮ ವೇಶ್ಯಾವಾಟಿಕೆ : ಪೊಲೀಸರ ದಾಳಿ, ಇಬ್ಬರ ವಿರುದ್ಧ ಪ್ರಕರಣ
- ಚಾಮರಾಜನಗರದಲ್ಲಿ ಮನಕಲಕುವ ದುರಂತ ಮಲೆ ಮಾದೇಶ್ವರ ಬೆಟ್ಟದ ಸಮೀಪ ಚಿರತೆ ದಾಳಿಗೆ 10 ವರ್ಷದ ಬಾಲಕ ಬಲಿಉಡುಪಿ ಜಿಲ್ಲೆಯಲ್ಲೂ ಚಿರತೆ ಕಾಟ ಹೆಚ್ಚಳ: ಮುನ್ನೆಚ್ಚರಿಕೆ ಕ್ರಮಕ್ಕೆ ತುಳುನಾಡ ರಕ್ಷಣಾ ವೇದಿಕೆ ಆಗ್ರಹ
- ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ನಿಧನ.

