Thursday, April 25, 2024
spot_img
More

    Latest Posts

    ಹೆಜ್ಜೇನು ದಾಳಿಗೆ ಕಾಫಿ ಮಂಡಳಿ ಮಾಜಿ ಅಧ್ಯಕ್ಷ M.S.ಭೋಜೇಗೌಡ ಸಾವು

    ಚಿಕ್ಕಮಗಳೂರು:ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ಇಂದು(ಶನಿವಾರ) ದುರ್ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಕಾಫಿ ತೋಟಕ್ಕೆ ಹೋಗಿದ್ದ ಸಮಯದಲ್ಲಿ ಹೆಜ್ಜೇನು ದಾಳಿ ನಡೆದಿದೆ.  ಒಮ್ಮೆಲೆ ಸಾವಿರಕ್ಕೂ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ತೋಟದ ಮಾಲೀಕ ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಎಂ ಎಸ್ ಭೋಜೇಗೌಡ ಅಸುನೀಗಿದ್ದಾರೆ. 

    ಕಾಫಿ ತೋಟಕ್ಕೆ ಹೋಗಿದ್ದಂತ ಸಂದರ್ಭದಲ್ಲಿ ದಿಢೀರ್ ಹೆಜ್ಜೇನು ದಾಳಿ ನಡೆಸಿದ ಕಾರಣದಿಂದಾಗಿ ಕಾಫಿ ಮಂಡಳಿ ಮಾಜಿ ಅಧ್ಯಕ್ಷ ಎಂ.ಎಸ್ ಬೋಜೇಗೌಡ (74 )ಸಾವನ್ನಪ್ಪಿರೋ ಘಟನೆ ನಡೆದಿದೆ. ಚಿಕ್ಕಮಗಳೂರುತಾಲೂಕಿನ ಕೃಷ್ಣಗಿರಿಯ ಕಾಫಿ ಎಸ್ಟೇಟ್‌ಗೆ ಎಂದಿನಂತೆ ತೆರಳಿದ್ದರು. ತೋಟದಲ್ಲಿ ಸುತ್ತಾಡುತ್ತಿದ್ದಂತ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಸಾವಿರಕ್ಕೂ ಹೆಚ್ಚು ಹೆಜ್ಜೇನುಗಳು ದಾಳಿ ನಡೆಸಿ ಕಚ್ಚಿದ ಪರಿಣಾಮ, ದಾಳಿಗೆ ಒಳಗಾದಂತ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ರೂ ಚಿಕಿತ್ತೆ ಫಲಕಾರಿಯಾಗದೇ  ಮೃತಪಟ್ಟಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss