ಮಂಗಳೂರು, ಜುಲೈ 9: ಸುರತ್ಕಲ್ ಸಮೀಪದ ಕಾಟಿಪಳ್ಳದ ಅಲ್ ಬದ್ರಿಯಾ ಮದರಸಕ್ಕೆ ನುಗ್ಗಿ ಉಸ್ತಾದ್ ಮೇಲೆ ಹಲ್ಲೆ ನಡೆಸಿದ ಆರೋಪದಡಿ ದಂಪತಿ ವಿರುದ್ಧ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಭ್ಯ ಮಾಹಿತಿಯಂತೆ, ಮದರಸೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 12 ವರ್ಷದ ಬಾಲಕನಿಗೆ ಶಿಸ್ತು ಕ್ರಮದ ಭಾಗವಾಗಿ ಉಸ್ತಾದ್ ಉಮರ್ ಫಾರೂಕ್ ಬೆತ್ತದಿಂದ ಹೊಡೆದಿದ್ದಾರೆ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಬಾಲಕನ ತಂದೆ ಸಂಬುದ್ದೀನ್ ಹಾಗೂ ಅವರ ಪತ್ನಿ ಮದರಸೆಗೆ ಆಗಮಿಸಿ ಉಸ್ತಾದ್ ಉಮರ್ ಫಾರೂಕ್ ಅವರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಘಟನೆ ವೇಳೆ ಮದರಸೆಯೊಳಗೆ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಹಲ್ಲೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಈ ಸಂಬಂಧ ಅಲ್ ಬದ್ರಿಯಾ ಜುಮಾ ಮಸೀದಿಯ ಪ್ರಧಾನ ಕಾರ್ಯದರ್ಶಿ ಎಂ.ಎ. ಹನೀಫ್ ನೀಡಿದ ದೂರಿನ ಮೇರೆಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಸಂಬುದ್ದೀನ್ ಹಾಗೂ ಅವರ ಪತ್ನಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) ಕಲಂ 329(1), 115(2), 352, 351(2), 351(3) ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Trending
- ಮಲ್ಪೆ ಬಂದರಿನಲ್ಲಿ ಮೀನುಗಾರ ಕಾರ್ಮಿಕನ ಕೊಲೆಬೋಟಿನ ಕ್ಯಾಬಿನ್ನಲ್ಲೇ ಚೂರಿ ಇರಿತ; ಪರಾರಿಯಾಗುತ್ತಿದ್ದ ಆರೋಪಿ ರೈಲು ನಿಲ್ದಾಣದಲ್ಲಿ ಬಂಧನ
- ₹5 ಕೋಟಿಗೂ ಅಧಿಕ ಹಣ ಸಂಗ್ರಹದ ಲೆಕ್ಕಪತ್ರ ಎಲ್ಲಿದೆ? — ಮಂಗಳಾ ಸ್ವಿಮ್ಮಿಂಗ್ ಕ್ಲಬ್ ವಿರುದ್ಧ ಮಾಜಿ ಕಾರ್ಯದರ್ಶಿ ಆರ್. ಧನರಾಜ್ ಆರೋಪ
- ಮುದರಂಗಡಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮುಂಬೈ ನಟೋರಿಯಸ್ ಗ್ಯಾಂಗ್ಸ್ಟರ್ ಅನುಜ್ ಪಾಟೀಲ್ ಬಂಧನ
- ಆಟಿದ ಐಸಿರಿ’ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸದಸ್ಯರಿಗೆ ಗೌರವ ಅಭಿನಂದನೆ
- 30–50ರ ವಯೋಮಾನದವರಲ್ಲಿ ಸ್ಟ್ರೋಕ್ ಪ್ರಕರಣಗಳ ಏರಿಕೆ; ‘ಸುವರ್ಣಾವಧಿ’ಯಲ್ಲಿ ಚಿಕಿತ್ಸೆ ಪಡೆಯಲು ಕರೆ
- ಪತ್ರಕರ್ತ ಶ್ರೀಕಾಂತ್ ಹೆಮ್ಮಾಡಿ ಮೇಲಿನ ಹಲ್ಲೆ ಖಂಡನೀಯ: ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಉಡುಪಿ ಪತ್ರಕರ್ತರ ಸಂಘ ಆಗ್ರಹ
- ಆರೂರು ಅಡ್ಜಿಲು ಭಾಗದ ವಿದ್ಯುತ್ ಸಮಸ್ಯೆಗೆ ಸ್ಪಂದಿಸಿದ ಮೆಸ್ಕಾಂ ಒಂದು ತಿಂಗಳೊಳಗೆ ಹೊಸ ಟಿಸಿ ಅಳವಡಿಸುವ ಭರವಸೆ – ತುಳುನಾಡು ರಕ್ಷಣಾ ವೇದಿಕೆ ಆಗ್ರಹ
- ಆಗಸ್ಟ್ 23ರಂದು ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ “ಮರಿಯಾಳದ ಮಿನದನ” ಪೂರ್ವಭಾವಿ ಸಭೆ

