ಮಂಗಳೂರು : ಮಂಗಳೂರಿನ ಖ್ಯಾತ ಹೋಟೆಲ್ ಉದ್ಯಮಿ,ಶ್ರೀದೇವಿ ವಿದ್ಯಾ ಸಮೂಹ ಸಂಸ್ಥೆ ಗಳ ಮುಖ್ಯಸ್ಥ, ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಸ್ಥಾಪಕಧ್ಯಕ್ಷ ಎ. ಸದಾನಂದ ಶೆಟ್ಟಿ ಅವರ ಧರ್ಮಪತ್ನಿ ಮೂಲ್ಕಿ ಕುಬೆವೂರು ದೊಡ್ಡಮನೆ ಮೈನಾ ಎಸ್ ಶೆಟ್ಟಿ(75 ವರ್ಷ )ಅವರು ಅಲ್ಪ ಕಾಲದ ಆಸಾವಖ್ಯ ದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ 8 ಕ್ಕೆ ನಿಧನರಾದರು.
ಮೃತ ರು ಶ್ರೀದೇವಿ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಯಾಗಿದ್ದು ಶ್ರೀದೇವಿ ಸಮೂಹ ಸಂಸ್ಥೆ ಗಳನ್ನು ಕಟ್ಟಿ ಬೆಳೆಸಿದವರು. ಮಂಗಳೂರಿನ ಕ್ವಾಲಿಟಿ-ಕುಡ್ಲ ಹೋಟೆಲ್ ಸಮೂಹ ಗಳನ್ನು ತನ್ನ ಕ್ರಿಯಾಶೀಲತೆ ಇಂದ ಬೆಳೆಸಿ, ರಾಜ್ಯದ ಪ್ರತಿಷ್ಠಿತ ಕೇಟರಿಂಗ್ ಸಂಸ್ಥೆ ಯಾಗಿ ರೂಪು ಗೊಳ್ಳುವಲ್ಲಿ ಶ್ರಮಿಸಿದವರು. ಜಿಲ್ಲೆಯ ಹಲವಾರು ಪ್ರತಿಷ್ಠಿತ ಕೇಟರಿಂಗ್, ಹೋಟೆಲ್ ಉದ್ಯಮಿಗಳಿಗೆ ಮಾರ್ಗದರ್ಶಿ ಹಿರಿಯರಾಗಿದ್ದವರು. ಬೆಂಗಳೂರು,ಮಂಗಳೂರಿನಲ್ಲಿ ನಡೆದಿದ್ದ ಚಾರಿತ್ರಿಕ ವಿಶ್ವ ಬಂಟರ ಸಮ್ಮೇಳನದ ಊಟಪಚಾರದ ಸಂಪೂರ್ಣ ಜವಾಬ್ದಾರಿ ಯನ್ನು ಯಶಸ್ವಿಯಾಗಿ ನಿರ್ವಹಿಸಿದವರು. ಸರಳ ಸಜ್ಜನಿಕೆಯಿಂದ ಎಲ್ಲರ ಪ್ರೀತಿ ಗೌರವಗಳಿಗೆ ಪಾತ್ರರಾಗಿದ್ದರು. ಮೂಲ್ಕಿ ಕುಬೆವೂರು ದೊಡ್ಡಮನೆಯ ಕುಟುಂಬ ಸ್ನೇಹ ಮಿಲನ ವ್ಯವಸ್ಥೆ ಯಲ್ಲಿ ಮುಂಚೂಣಿ ಯಲ್ಲಿದ್ದರು. ಮೃತ ರು ಪತಿ, ಇಬ್ಬರು ಪುತ್ರ ರನ್ನು ಹಾಗೂ ಅಪಾರ ಅಭಿಮಾನಿ ಬಂಧು ಗಳನ್ನು ಅಗಲಿದ್ದಾರೆ. ಮೃತರ ಅಂತಿಮ ದರ್ಶನ ಗುರುವಾರ ಬೆಳಿಗ್ಗೆ 10.30 ರಿಂದ 11.30 ರ ತನಕ ಮಂಗಳೂರು ಎಮ್. ಜಿ. ಕ್ರಾಸ್ ರಸ್ತೆ ಯ “ಸದಾನಂದ ” ಸ್ವಗೃಹ ದಲ್ಲಿ ನಡೆಯಲಿದೆ ಎಂದು ಕುಟುಂಸ್ಥರು ಮಾಹಿತಿ ನೀಡಿದ್ದಾರೆ.
ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂಬುದಾಗಿ ತುಳುನಾಡ ರಕ್ಷಣಾ ವೇದಿಕೆ ಶ್ರದಾಂಜಲಿ ಸಲ್ಲಿಸುತ್ತಿದೆ.