Thursday, April 18, 2024
spot_img
More

    Latest Posts

    ಮದುವೆಯಾಗುವಂತೆ ಒತ್ತಾಯಿಸಿದ ಮೇಕಪ್ ಆರ್ಟಿಸ್ಟ್ ಪ್ರಿಯಕರನಿಂದಲೇ ಕೊಲೆ

    ಕೊಚ್ಚಿ: ತನ್ನನ್ನು ಮದುವೆಯಾಗುವಂತೆ ವಿವಾಹಿತ ಮೇಕಪ್ ಆರ್ಟಿಸ್ಟ್‌ವೊಬ್ಬಳನ್ನು‌ ವಿವಾಹಿತ ಪ್ರಿಯಕರ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಕೇರಳದ ಕಾಸರಗೋಡಿನ ಕನ್ಹಂಗಾಡ್ನಲ್ಲಿರುವ ಲಾಡ್ಜ್‌ವೊಂದರಲ್ಲಿ ನಡೆದಿದೆ.

    ಉದ್ಮಾ ಪಂಚಾಯಿತಿಯ ಮುಕ್ಕುನೋಥ್ ನಿವಾಸಿ ಪಿ.ಬಿ. ದೇವಿಕಾ (34) ಕೊಲೆಯಾದ ಮಹಿಳೆ. ಹಂತಕ ಪ್ರಿಯಕರ ಸತೀಶ್ (36) ಕೊಲೆ ಮಾಡಿದ ಬಳಿಕ ಲಾಡ್ಜ್ ರೂಮ್ ಲಾಕ್ ಮಾಡಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಆರೋಪಿ ಸತೀಶ್ ಮುಲ್ಲಿಯಾರ್ ಗ್ರಾಮ ಪಂಚಾಯಿತಿಯ ಬೊವಿಕನಮ್ ಮೂಲದ ನಿವಾಸಿ. ಈತ ಕನ್ಹಂಗಾಡ್ ಪಟ್ಟಣದಲ್ಲಿ ಖಾಸಗಿ ಸೆಕ್ಯುರಿಟಿ ಏಜೆನ್ಸಿ ನಡೆಸುತ್ತಿದ್ದಾನೆ. ಈಗಾಗಲೇ ಈತನಿಗೆ ಮದುವೆಯಾಗಿದ್ದು, ಒಂದು ಮಗು ಕೂಡ ಇದೆ. ದೇವಿಕಾಗೂ ಮದುವೆ ಆಗಿತ್ತು. ಆಕೆಗೆ ಇಬ್ಬರು ಮಕ್ಕಳಿದ್ದಾರೆ.

    ಪತ್ನಿಗೆ ಡಿವೋರ್ಸ್ ನೀಡಿ ತನ್ನೊಂದಿಗೆ ಇರುವಂತೆ ದೇವಿಕಾ ಒತ್ತಾಯ ಮಾಡುತ್ತಿದ್ದಳು. ಹೀಗಾಗಿ ಆಕೆಯನ್ನು ಕೊಲೆ ಮಾಡಿರುವುದಾಗಿ ಸತೀಶ್ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡು ತಿಂಗಳಿನಿಂದ ಸತೀಶ್ ಲಾಡ್ಜ್ನಲ್ಲಿ ವಾಸವಿದ್ದ. ಕನ್ಹಂಗಾಡ್ನಿಂದ 20 ಕಿಮೀ ದೂರದಲ್ಲಿರುವ ತನ್ನ ಊರಿನಿಂದ ದೇವಿಕಾ ಲಾಡ್ಜ್ಗೆ ಬಂದಿದ್ದಳು. CITU ಗೆ ಸಂಯೋಜಿತವಾಗಿರುವ ಕೇರಳ ಸ್ಟೇಟ್ ಬಾರ್ಬರ್-ಬ್ಯೂಟಿಷಿಯನ್ ವರ್ಕರ್ಸ್ ಯೂನಿಯನ್‌ನ ಜಿಲ್ಲಾ ಸಮಾವೇಶದಲ್ಲಿ ಭಾಗವಹಿಸಲು ಕನ್ಹಂಗಾಡ್ಗೆ ಬಂದಿದ್ದಳು. ಸಮಾವೇಶ ಬಳಿಕ ಸತೀಶ್ನನ್ನು ಭೇಟಿ ಮಾಡಿ, ಆತನೊಂದಿಗೆ ಲಾಡ್ಜ್ಗೆ ತೆರಳಿದ್ದಾಗ ಈ ಕೊಲೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss