ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ “ಪಂಪ ಸದ್ಭಾವನ “ರಾಜ್ಯ ಪ್ರಶಸ್ತಿ ಪ್ರದಾನ ರಂಗ ಸಂಭ್ರಮ 2025 ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏಪ್ರಿಲ್ ಐದರಂದು ಶನಿವಾರ ನಡೆಯಿತು. ಕಾರ್ಯಕ್ರಮವನ್ನು ನಾಟಕ ಅಕಾಡೆಮಿ ಅಧ್ಯಕ್ಷರಾದ ಕೆ.ವಿ.ನಾಗರಾಜು ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಾಡಿನ ವಿವಿಧ ಕ್ಷೇತ್ರದ ಸಾಧಕರಿಗೆ ಪಂಪ ಸದ್ಭಾವನಾ 2025 ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದರು. ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಸೇವೆಗಾಗಿ ಪ್ರತಿಷ್ಠಿತ “ಪಂಪ ಸದ್ಭಾವನಾ” ರಾಜ್ಯ ಪ್ರಶಸ್ತಿಯನ್ನು ನಿವೃತ ಲೋಕಾಯುಕ್ತ ಹಾಗೂ ನ್ಯಾಯಮೂರ್ತಿಗಳಾದ ಎನ್ ಸಂತೋಷ ಹೆಗ್ಡೆ ಅವರು ಪ್ರಧಾನ ಮಾಡಿದರು. ಮುಖ್ಯ ಅತಿಥಿಗಳಾಗಿ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಲವಂತರಾವ್ ಪಾಟೀಲ್ ,ನಿವೃತ್ತ ಡಿ.ಸಿ ಡಾ. ಡಿ ವಿಶ್ವನಾಥ್ ,ಡಾ ಲಕ್ಷ್ಮೀದೇವಿ ಬೆಂಗಳೂರು. ಕಲಾಜಗತು ರೂವಾರಿ ತೋನ್ಸೆ ವಿಜಯ ಕುಮಾರ್ ಶೆಟ್ಟಿ ,ಡಾ.ಪುತೂರಾಯ, ರಾಷ್ಟ್ರೀಯ ಭಷ್ಟೃಚಾರ ನಿಗ್ರಹ ದಳದ ಡಾ .ಪ್ರವೀಣ್ ಹೀರೆಮಠ್ ,ವೇದ ಮೂರ್ತಿ ಡಾ.ಕಾಡ್ಯಯ, ಸರಿಗಮ ಸಂಗೀತಗಾರ ಜಿ.ಕೆ ರಾಜು,
ವೀರೇಶ್ ಮುತಿನ ಮಠ.,ಕೆಂಚನೂರು ಶಂಕರ್ ಉಪಸ್ಥಿತರಿದರು.
Trending
- INDIA through my EYES’ ಚಿತ್ರಕಲಾ ಸ್ಪರ್ಧೆಯಲ್ಲಿ ಚಿನ್ಮಯಿ ಎಸ್. ವಿಜೇತೆ
- ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ
- ಕೋರ್ದಬ್ಬು ದೈವದ ಪಾತ್ರಿ ಸೀನ ಪಾತ್ರಿ ನಂದಿಕೂರು ಮೆರೆಗ್ ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್ದ “ತುಳುವಾಲ ಕುಲಸಿರಿ – 2026” ಪ್ರಶಸ್ತಿ ಘೋಷಣೆ
- ಪುತ್ತೂರಿನ ಸಾನ್ವಿತಾ ಎಂ. ರೈ ಗಿನ್ನೆಸ್ ವಿಶ್ವ ದಾಖಲೆಗೆ ಸೇರ್ಪಡೆ
- ಗ್ರೀನ್ ವ್ಯೂ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
- ಮಂಗಳೂರಿನ ಸಿಟಿ ಸೆಂಟರ್ KFC ಮಳಿಗೆಯಲ್ಲಿ 9 ತಿಂಗಳ ಹಿಂದಿನ ಮಾಂಸ ಪತ್ತೆ: ಆರೋಗ್ಯಾಧಿಕಾರಿಗಳಿಂದ ಮಳಿಗೆಗೆ ಬೀಗ
- ತಲ್ಲೂರಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ಆಟೋ ಚಾಲಕರಿಗೆ ಸಿಹಿ ವಿತರಣೆ, ಶೇ.90 ಅಂಕ ಗಳಿಸಿದ ಸ್ಪಂದಿತ ಪೂಜಾರಿಗೆ ಡಾ. ರವೀಂದ್ರ ತಲ್ಲೂರು ಅವರಿಂದ ಸನ್ಮಾನ
- ಡಿ.ಕೆ. ಯೂಸ್ಡ್ ವೆಹಿಕಲ್ ಡೀಲರ್ಸ್ ಅಸೋಸಿಯೇಷನ್ನ ನೂತನ ಕಾನೂನು ಸಲಹೆಗಾರರಾಗಿ ಶ್ರೀ ಸಿನಾನ್ ಸಿದ್ದೀಕ್ ನೇಮಕ

