ಡಾ.ಮಾಲತಿ ಶೆಟ್ಟಿ ಮಾಣೂರುರವರಿಗೆ “ಪಂಪ ಸದ್ಭಾವನ “ರಾಜ್ಯ ಪ್ರಶಸ್ತಿ ಪ್ರದಾನ ರಂಗ ಸಂಭ್ರಮ 2025 ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಏಪ್ರಿಲ್ ಐದರಂದು ಶನಿವಾರ ನಡೆಯಿತು. ಕಾರ್ಯಕ್ರಮವನ್ನು ನಾಟಕ ಅಕಾಡೆಮಿ ಅಧ್ಯಕ್ಷರಾದ ಕೆ.ವಿ.ನಾಗರಾಜು ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ನಾಡಿನ ವಿವಿಧ ಕ್ಷೇತ್ರದ ಸಾಧಕರಿಗೆ ಪಂಪ ಸದ್ಭಾವನಾ 2025 ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದರು. ಮಂಗಳೂರಿನ ಅಮೃತ ಪ್ರಕಾಶ ಪತ್ರಿಕೆಯ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ಅವರಿಗೆ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಸೇವೆಗಾಗಿ ಪ್ರತಿಷ್ಠಿತ “ಪಂಪ ಸದ್ಭಾವನಾ” ರಾಜ್ಯ ಪ್ರಶಸ್ತಿಯನ್ನು ನಿವೃತ ಲೋಕಾಯುಕ್ತ ಹಾಗೂ ನ್ಯಾಯಮೂರ್ತಿಗಳಾದ ಎನ್ ಸಂತೋಷ ಹೆಗ್ಡೆ ಅವರು ಪ್ರಧಾನ ಮಾಡಿದರು. ಮುಖ್ಯ ಅತಿಥಿಗಳಾಗಿ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ಬಲವಂತರಾವ್ ಪಾಟೀಲ್ ,ನಿವೃತ್ತ ಡಿ.ಸಿ ಡಾ. ಡಿ ವಿಶ್ವನಾಥ್ ,ಡಾ ಲಕ್ಷ್ಮೀದೇವಿ ಬೆಂಗಳೂರು. ಕಲಾಜಗತು ರೂವಾರಿ ತೋನ್ಸೆ ವಿಜಯ ಕುಮಾರ್ ಶೆಟ್ಟಿ ,ಡಾ.ಪುತೂರಾಯ, ರಾಷ್ಟ್ರೀಯ ಭಷ್ಟೃಚಾರ ನಿಗ್ರಹ ದಳದ ಡಾ .ಪ್ರವೀಣ್ ಹೀರೆಮಠ್ ,ವೇದ ಮೂರ್ತಿ ಡಾ.ಕಾಡ್ಯಯ, ಸರಿಗಮ ಸಂಗೀತಗಾರ ಜಿ.ಕೆ ರಾಜು,
ವೀರೇಶ್ ಮುತಿನ ಮಠ.,ಕೆಂಚನೂರು ಶಂಕರ್ ಉಪಸ್ಥಿತರಿದರು.
Trending
- ಡೊಂಕ ಬಂದರಿನಲ್ಲಿ ಭೀಕರ ಅಗ್ನಿ ಅವಘಡ: ಪರ್ಷಿಯನ್ ಮೀನುಗಾರಿಕಾ ಬೋಟ್ ಸಂಪೂರ್ಣ ಭಸ್ಮ – ₹30 ಲಕ್ಷಕ್ಕೂ ಅಧಿಕ ನಷ್ಟ
- ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿ ಚಾರ್ಜ್ ಖಂಡಿಸಿ ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ – ರಾಹುಲ್, ಪ್ರಿಯಾಂಕಾ ಸೇರಿ ಹಲವು ನಾಯಕರು ವಶಕ್ಕೆ
- ಮೂಲ್ಕಿಯ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಭವ್ಯ ಸಭಾಭವನ ಡಿಸೆಂಬರ್ ಅಂತ್ಯದೊಳಗೆ ಲೋಕಾರ್ಪಣೆ: ಮುಂಬೈ ದಾನಿಗಳಿಂದ ಬಲಿಷ್ಠ ಭರವಸೆ
- ಬ್ರಹ್ಮಾವರದಲ್ಲಿ ಅಂದರ್-ಬಾಹರ್ ಜೂಜಾಟದ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ, ₹6.41 ಲಕ್ಷ ಮೌಲ್ಯದ ವಸ್ತುಗಳ ವಶ
- ಲಾವಣ್ಯ ಹತ್ಯೆ ಪ್ರಕರಣಕ್ಕೆ ಕಠಿಣ ಶಿಕ್ಷೆ ವಿಧಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಮನವಿ
- ಭಾರೀ ಮಳೆಗೆ ಕಾರಿನ ಮೇಲೆ ಬೃಹತ್ ಮರ ಉರುಳಿ ಬಿದ್ದು ಆತಂಕ – ಚಾಲಕ ಅದೃಷ್ಟವಶಾತ್ ಪಾರು
- ಮಾತೃಸ್ವರೂಪಿ ಶ್ರೀಮತಿ ಚೆನ್ನಮ್ಮ ದೇವೇಗೌಡರವರ ನಿಧನಕ್ಕೆ ಸುಳ್ಯ ತಾಲೂಕು ಜನತಾದಳ (ಜಾತ್ಯತೀತ) ಘಟಕ ತೀವ್ರ ಸಂತಾಪ
- ಪರಮಜ್ಯೋತಿ ಭಜನಾ ಮಂಡಳಿ ವತಿಯಿಂದ ಸಂಭ್ರಮದಿಂದ ಆಟಿ ದೊಂಜಿ ದಿನ ಆಚರಣೆ,ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ: ಯೋಗಿಶ್ ಶೆಟ್ಟಿ ಜಪ್ಪು

