ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್ ಇದರ ಜನಪರ, ಸಾಮಾಜಿಕ ಚಟುವಟಿಕೆಗಳಲ್ಲಿ ಸಂಪೂರ್ಣ ಸಹಕಾರ ಹಾಗು ಉಡುಪಿ ಜಿಲ್ಲಾ ಖಾಝಿ ಯಾಗಿದ್ದ ತಾಜುಲ್ ಫುಕಹಾಹ್ ಬೇಕಲ್ ಉಸ್ತಾದ್ ಇಬ್ರಾಹಿಂ ಮುಸ್ಲಿಯಾರ್ ಅವರ ಅನುಸ್ಮರಣೆ ನಿಮಿತ್ತ ನಡೆದ ಬೃಹತ್ ವಿದ್ವಾಂಸ, ಉಮರಾ ಸಮಾವೇಶಕ್ಕೆ ಸ್ಥಳಾವಕಾಶ ಹಾಗೂ ಸಂಪೂರ್ಣ ಸಹಕಾರ ನೀಡಿದ ಬದ್ರಿಯಾ ಜುಮುಅ ಮಸ್ಜಿದ್ ಮಲ್ಲಾರು – ಮಜೂರು ಆಡಳಿತ ಸಮಿತಿಗೆ ಸುನ್ನೀ ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ಮೂಳೂರು ಸುನ್ನೀ ಸೆಂಟರ್ ನಲ್ಲಿ ನಡೆದ ಅಸಂಬ್ಲೇಜ್ ಕಾರ್ಯಕ್ರಮದಲ್ಲಿ ಉಪ ಖಾಝಿ ಅಬ್ದುರ್ರಹ್ಮಾನ್ ಮದನಿ ಯವರ ದಿವ್ಯ ಹಸ್ತದ ಮೂಲಕ
ಗೌರವ ಸಲ್ಲಿಸಲಾಯಿತು. ಗೌರವ ಸಮರ್ಪಣೆಯನ್ನು ಸ್ವೀಕರಿಸಿದ ಅಧ್ಯಕ್ಷ ಡಾ.ಎಂ.ಫಾರೂಕ್ ರವರು ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸಿದರು. ಮುಂದಿನ ದಿನಗಳಲ್ಲಿ ನಮ್ಮ ಸಹಕಾರವು ಮುಂದುವರೆಯಲಿದೆ ಎಂದು ಡಾ.ಫಾರೂಕ್ ರವರು ತಿಳಿಸಿದರು.
ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಅಬೂಬಕರ್ ನೇಜಾರ್,
ಕಾರ್ಯದರ್ಶಿ ಬಾವು ಹಾಜಿ ಮೂಳೂರು, ಖತೀಬ್ ಅಬ್ದುರ್ರಶೀದ್ ಸಖಾಫಿ, ಮೂಳೂರು ಮುದರ್ರಿಸ್ ಹಾಫಿಳ್ ಅಶ್ರಫ್ ಸಖಾಫಿ, ಸುನ್ನೀ ಉಲಮಾ ಒಕ್ಕೂಟದ ಕಾರ್ಯದರ್ಶಿ ಸುಲೈಮಾನ್ ಸಅದಿ, ಸುನ್ನೀ ಮ್ಯಾನೇಜ್ಮೆಂಟ್ ಅಸೋಸಿಯೇಶನ್ ಇದರ ಅಧ್ಯಕ್ಷರಾದ ಹುಸೈನ್ ಪಡುಕೆರೆ
ಉಪಸ್ಥಿತರಿದ್ದರು. ಮಿತ್ತೂರು ಹಂಝ ಮದನಿ ಧ್ಯೇಯೋದ್ದೇಶ ತರಗತಿ ಮಂಡಿಸಿದರು.
ಸಂಘಟನಾ ಕಾರ್ಯದರ್ಶಿ ಕಲ್ಕಟ್ಟ ಅಬ್ದುರ್ರಹ್ಮಾನ್ ರಝ್ವೀ ಕಾರ್ಯಕ್ರಮವನ್ನು ನಿರೂಪಿಸಿದರು.
ಕಾರ್ಯದರ್ಶಿ ಮುಹಮ್ಮದ್ ಅಶ್ರಫ್ ಫುರ್ಖಾನೀ ಸ್ವಾಗತವನ್ನು, ಕಾರ್ಯದರ್ಶಿ ಎನ್.ಸಿ.ರಹೀಮ್ ಧನ್ಯವಾದವನ್ನು ಸಮರ್ಪಿಸಿದರು. ಈ ಸಂದರ್ಭದಲ್ಲಿ ಬಿ.ಜೆ.ಎಂ ಜಮಾತ್ ಕಮಿಟಿ ಪರವಾಗಿ ಸಮಿತಿ ಕಾರ್ಯದರ್ಶಿ ಅಶ್ರಫ್ ಕರಂದಾಡಿ ಸದಸ್ಯರಾದ ರಝಕ್ ಕೊಪ್ಪ ಭಾಗವಹಿಸಿದ್ದರು
Trending
- ಡೊಂಕ ಬಂದರಿನಲ್ಲಿ ಭೀಕರ ಅಗ್ನಿ ಅವಘಡ: ಪರ್ಷಿಯನ್ ಮೀನುಗಾರಿಕಾ ಬೋಟ್ ಸಂಪೂರ್ಣ ಭಸ್ಮ – ₹30 ಲಕ್ಷಕ್ಕೂ ಅಧಿಕ ನಷ್ಟ
- ನವದೆಹಲಿ: ವಿದ್ಯಾರ್ಥಿಗಳ ಮೇಲೆ ಪೊಲೀಸ್ ಲಾಠಿ ಚಾರ್ಜ್ ಖಂಡಿಸಿ ಪ್ರಧಾನಿ ನಿವಾಸದ ಮುಂದೆ ಕಾಂಗ್ರೆಸ್ ಪ್ರತಿಭಟನೆ – ರಾಹುಲ್, ಪ್ರಿಯಾಂಕಾ ಸೇರಿ ಹಲವು ನಾಯಕರು ವಶಕ್ಕೆ
- ಮೂಲ್ಕಿಯ ಡಾ. ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಭವ್ಯ ಸಭಾಭವನ ಡಿಸೆಂಬರ್ ಅಂತ್ಯದೊಳಗೆ ಲೋಕಾರ್ಪಣೆ: ಮುಂಬೈ ದಾನಿಗಳಿಂದ ಬಲಿಷ್ಠ ಭರವಸೆ
- ಬ್ರಹ್ಮಾವರದಲ್ಲಿ ಅಂದರ್-ಬಾಹರ್ ಜೂಜಾಟದ ಮೇಲೆ ಪೊಲೀಸ್ ದಾಳಿ: ಇಬ್ಬರ ಬಂಧನ, ₹6.41 ಲಕ್ಷ ಮೌಲ್ಯದ ವಸ್ತುಗಳ ವಶ
- ಲಾವಣ್ಯ ಹತ್ಯೆ ಪ್ರಕರಣಕ್ಕೆ ಕಠಿಣ ಶಿಕ್ಷೆ ವಿಧಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಮನವಿ
- ಭಾರೀ ಮಳೆಗೆ ಕಾರಿನ ಮೇಲೆ ಬೃಹತ್ ಮರ ಉರುಳಿ ಬಿದ್ದು ಆತಂಕ – ಚಾಲಕ ಅದೃಷ್ಟವಶಾತ್ ಪಾರು
- ಮಾತೃಸ್ವರೂಪಿ ಶ್ರೀಮತಿ ಚೆನ್ನಮ್ಮ ದೇವೇಗೌಡರವರ ನಿಧನಕ್ಕೆ ಸುಳ್ಯ ತಾಲೂಕು ಜನತಾದಳ (ಜಾತ್ಯತೀತ) ಘಟಕ ತೀವ್ರ ಸಂತಾಪ
- ಪರಮಜ್ಯೋತಿ ಭಜನಾ ಮಂಡಳಿ ವತಿಯಿಂದ ಸಂಭ್ರಮದಿಂದ ಆಟಿ ದೊಂಜಿ ದಿನ ಆಚರಣೆ,ತುಳುನಾಡಿನ ಸಂಸ್ಕೃತಿ, ಸಂಪ್ರದಾಯ ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ: ಯೋಗಿಶ್ ಶೆಟ್ಟಿ ಜಪ್ಪು

