ಬ್ರಹ್ಮಾವರ : ಚಲಿಸುತ್ತಿದ್ದ ರೈಲು ಢಿಕ್ಕಿ ಹೊಡೆದ ಪರಿಣಾಮ ರೈಲು ಹಳಿ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ರಾತ್ರಿ ವೇಳೆ ಚಾಂತಾರು ಗ್ರಾಮದ ಹಾಲಿನ ಡೈರಿ ಹತ್ತಿರ ನಡೆದಿದೆ.
ಮೃತರನ್ನು 52ನೆ ಹೇರೂರು ಗ್ರಾಮದ ಕೊಳಂಬೆಯ ರಾಜೀವ ನಗರದ ರಾಜಶೇಖರ (45) ಎಂದು ಗುರುತಿಸಲಾಗಿದೆ.
ಮಾನಸಿಕ ಅಸ್ವಸ್ಥರಾಗಿರುವ ಇವರು, ರೈಲ್ವೇ ಟ್ರ್ಯಾಕ್ ದಾಟುತ್ತಿರುವಾಗ ರೈಲು ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರುಸ್ಥಳದಲ್ಲಿಯೇ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.