Saturday, April 20, 2024
spot_img
More

    Latest Posts

    ಮಂಗಳೂರು ದಸರಾ ಶೋಭಾಯಾತ್ರೆ ಇಂದು ಬೆಳ್ಳಂಬೆಳಗ್ಗೆ ಸಂಪನ್ನ

    ಮಂಗಳೂರು ದಸರಾ ಹಿನ್ನೆಲೆಯಲ್ಲಿ ರಾತ್ರಿಯಿಂದ ನಗರ ಪ್ರದಕ್ಷಿಣೆ ಮಾಡಿದ್ದ ಶೋಭಾಯಾತ್ರೆ ಇಂದು ಬೆಳ್ಳಂಬೆಳಗ್ಗೆ ಶ್ರೀಕ್ಷೇತ್ರ ಕುದ್ರೋಳಿಯಲ್ಲಿ ಸಂಪನ್ನಗೊಂಡಿತು.

    ಮಂಗಳೂರಿನಲ್ಲಿ ಈ ಬಾರಿ ವೈಭವದ ಶೋಭಾಯಾತ್ರೆ ಕಳೆಗಟ್ಟಿತ್ತು. ಶಾರದೆ, ನವದುರ್ಗೆಯರ ಸಹಿತ, ಮಹಾಗಣಪತಿಯ ಮೃಣ್ಮಯ ಮೂರ್ತಿಗಳ ಶೋಭಾಯಾತ್ರೆ ಕುದ್ರೋಳಿ ಕ್ಷೇತ್ರದಿಂದ ರಾತ್ರಿ ಆರಂಭವಾಯ್ತು. ಈ ಸುಂದರ ಮೂರ್ತಿಗಳನ್ನು ಮಂಗಳೂರು ನಗರದಾದ್ಯಂತ ಶೋಭಾಯಾತ್ರೆ ಮೂಲಕ ಕೊಂಡೊಯ್ದು ಇಂದು ಮುಂಜಾನೆ ವೇಳೆಗೆ ಮತ್ತೆ ಕುದ್ರೋಳಿ ಶ್ರೀಕ್ಷೇತ್ರದ ಪುಷ್ಕರಣಿಯಲ್ಲಿ ನಿಮಜ್ಜನ ಮಾಡಲಾಯಿತು.

    ಈ ಶೋಭಾಯಾತ್ರೆಯಲ್ಲಿ ವಿವಿಧ ಕಲಾ ತಂಡಗಳು, ಟ್ಯಾಬ್ಲೊಗಳು, ಸಂಗೀತ ವಾದ್ಯ ಮೇಳಗಳು, ಮಂಗಳವಾದ್ಯಗಳು, ಭಜನಾ ಸಂಕೀರ್ತನಾ ತಂಡಗಳು, ವಿವಿಧ ಜಿಲ್ಲೆಗಳ ಸಾಂಸ್ಕೃತಿಕ ಕಲಾ ತಂಡಗಳು ಮಂಗಳೂರು ದಸರಾ ವೈಭವದ ಶೋಭಾಯಾತ್ರೆಗೆ ಮೆರುಗು ನೀಡಿದವು.

    ಶೋಭಾಯಾತ್ರೆ ಸಾಗುವ ದಾರಿ ಉದ್ದಕ್ಕೂ ವಿದ್ಯುತ್ ದೀಪಾಲಂಕೃತದಿಂದ ಕಂಗೊಳಿಸುತ್ತಿತ್ತು. ಈ ಶೋಭಾಯಾತ್ರೆಗೆ ಮಂಗಳೂರು ಮಾತ್ರವಲ್ಲದೇ, ಹೊರ ರಾಜ್ಯ, ಹೊರ ದೇಶಗಳಿಂದಲೂ ಜನರು ಆಗಮಿಸಿದ್ದರು.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss