Monday, May 29, 2023

ಮಂಗಳೂರು: ದುಬೈಗೆ ಹೊರಟ್ಟಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ, ಟೇಕಾಫ್ ಕ್ಯಾನ್ಸಲ್.!

ಮಂಗಳೂರು: ಇನ್ನೇನು ಟೇಕಾಫ್ ಆಗಬೇಕಿದ್ದ ವಿಮಾನಕ್ಕೆ ಹಕ್ಕಿಯೊಂದು ಢಿಕ್ಕಿ ಹೊಡೆದ ಪರಿಣಾಮ ಟೇಕಾಫ್ ಕ್ಯಾನ್ಸಲ್ ಆದ ಘಟನೆ ಇಂದು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಇಂಡಿಗೋ ವಿಮಾನವು ಇಂದು ಬೆಳಗ್ಗೆ...
More

    Latest Posts

    ಮಂಗಳೂರು: ವಿಮಾನ ನಿಲ್ದಾಣದಲ್ಲಿ 1.69 ಕೋಟಿ ಮೌಲ್ಯದ ವಜ್ರ ವಶಕ್ಕೆ

    ಮಂಗಳೂರು : ಅಕ್ರಮ ಚಿನ್ನ ಸಾಗಾಟ ಹೆಚ್ಚಾಗಿ ನಡೆಯುತ್ತಿದ್ದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಕೋಟ್ಯಾಂತರ ಮೌಲ್ಯದ ವಜ್ರವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಘಟನೆ ನಡೆದಿದ್ದು, ಪ್ರಯಾಣಿಕನೊಬ್ಬನಿಂದ 1.69...

    ಮಣ್ಣಿನ ಪಾತ್ರೆಯಲ್ಲಿ ‘ಮೊಸರು’ ಸಂಗ್ರಹಿಸೋದು ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ.?

    ಮೊಸರು ತಿನ್ನದೆ ಊಟ ಪೂರ್ಣವಾಗುವುದಿಲ್ಲ. ಅದಕ್ಕಾಗಿಯೇ ಬಹುತೇಕ ಎಲ್ಲಾ ಮನೆಗಳಲ್ಲಿ ಮೊಸರು ಇರಬೇಕು. ಅಲ್ಲದೆ, ಮೊಸರು ಅನೇಕ ಆರೋಗ್ಯ ಪ್ರಯೋಜನಗಳನ್ನ ಹೊಂದಿದ್ದು, ರುಚಿಯೂ ಅದ್ಭುತವಾಗಿರುತ್ತೆ. ಬೇಸಿಗೆಯಲ್ಲಿ ಮೊಸರು ಆರೋಗ್ಯಕ್ಕೆ ಬಹಳ...

    ಕುಂದಾಪುರ: ಏಳನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು

    ಕುಂದಾಪುರ: ಬಿಲ್ಲಾಡಿ ಗ್ರಾಮದ ಬನ್ನೇರಳಕಟ್ಟೆ ಎಂಬಲ್ಲಿ ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೇ 26ರಂದು ನಡೆದಿದೆ. ಬನ್ನೇರಳಕಟ್ಟೆ ನಿವಾಸಿ ಕೃಷ್ಣ ಎಂಬವರ ಪುತ್ರಿ ಹದಿಮೂರು ವರ್ಷದ ಪ್ರಿಯಾ...

    ನೂತನ ಸಂಸತ್ ಭವನದ ಉದ್ಘಾಟನೆ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಭಾರತ – ಗಮನ ಸೆಳೆದ ಸರ್ವಧರ್ಮೀಯರ ಸಮ್ಮಿಲನ

    ನವದೆಹಲಿ : ನೂತನ ಸಂಸತ್ ಭವನ ಉದ್ಘಾಟನಾ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನಾಮಫಲಕವನ್ನು ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಸರ್ವಧರ್ಮೀಯರ ಸಮ್ಮಿಲನವು ವಿಶೇಷವಾಗಿ ಗಮನ ಸೆಳೆಯಿತು. ಹೌದು, ನೂತನ ಸಂಸತ್ ಭವನ ಉದ್ಘಾಟನಾ...

    ಮಂಗಳೂರು: ಶೋಭಾಯಾತ್ರೆ ಹಿನ್ನೆಲೆ, ಅ.5ರಿಂದ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ

    ಮಂಗಳೂರು: ನಗರದ ಶ್ರೀ ಗೋಕರ್ಣನಾಧೇಶ್ವರ ದೇವಸ್ಥಾನದಿಂದ ನವದುರ್ಗೆಯರು, ಶಾರದೆ, ಗಣೇಶ ವಿಗ್ರಹ, ವಿವಿಧ ಟ್ಯಾಬ್ಲೋಗಳ ಶೋಭಾಯಾತ್ರೆಗೆ ಅಪಾರ ಜನಸಂಖ್ಯೆ ಸೇರುವ ನಿರೀಕ್ಷೆ ಇರುವುದರಿಂದ ಕಾನೂನು ಸುವ್ಯವಸ್ಥೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕ ಸುರಕ್ಷತೆಯ ದೃಷ್ಠಿಯಿಂದ ಭಾರತೀಯ ಮೋಟಾರು ವಾಹನ ಕಾಯ್ದೆ 1988 ಕಲಂ 115 ಮತ್ತು 116ರಲ್ಲಿ ಪ್ರದತ್ತ ಅಧಿಕಾರವನ್ನು ಚಲಾಯಿಸಿ ಅ.05ರ ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಅ.06ರ ಗುರುವಾರ ಬೆಳಿಗ್ಗೆ 6 ಗಂಟೆಯವರೆಗೆ ವಾಹನ ಸಂಚಾರಕ್ಕೆ ಬದಲಿ ವ್ಯವಸ್ಥೆ ಮಾಡಲಾಗಿದೆ.

    ವಿವರ ಇಂತಿದೆ: ಕೊಟ್ಟಾರ ಚೌಕಿ ಜಂಕ್ಷನ್ ಮುಖಾಂತರ ನಗರಕ್ಕೆ ಬರುವ ವಾಹನಗಳ ನಗರ ಪ್ರವೇಶವನ್ನು ನಿಷೇಧಿಸಲಾಗಿದೆ ಹಾಗೂ ವಾಹನಗಳು ಕುಂಟಿಕಾನ, ಕೆ.ಪಿ.ಟಿ, ನಂತೂರು ಮಾರ್ಗವಾಗಿ ನಗರ ಪ್ರವೇಶಿಸುವುದು.

    ನಗರದಿಂದ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಮುಖೇನ ಕೊಟ್ಟಾರ ಚೌಕಿ ಕಡೆಗೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ನಗರದಿಂದ ಲಾಲ್‍ಬಾಗ್ ಮಾರ್ಗವಾಗಿ ಕುಂಟಿಕಾನ ಹಾಗೂ ಕೆ.ಪಿ.ಟಿ ಕಡೆಗೆ ಸಂಚರಿಸುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಕೆ.ಎಸ್.ಆರ್ ರಸ್ತೆಯಿಂದ ಎಂ.ಜಿ ರಸ್ತೆಯಲ್ಲಿ ಸಂಚರಿಸುವ ವಾಹನಗಳು ಪಿ.ವಿ.ಎಸ್ ಮಾರ್ಗವಾಗಿ ಬಂಟ್ಸ್ ಹಾಸ್ಟೆಲ್ ಮೂಲಕ ಸಂಚರಿಸುವುದು. ಅಂಬೇಡ್ಕರ್ ಸರ್ಕಲ್ ಮೂಲಕ ಎಂ.ಜಿ ರಸ್ತೆಗೆ ಸಾಗುವ ವಾಹನಗಳು ಬಂಟ್ಸ್ ಹಾಸ್ಟೆಲ್‍ನಿಂದ ಸಂಚರಿಸುವುದು.

    ನ್ಯೂ ಚಿತ್ರಾ ಜಂಕ್ಷನ್‍ನಿಂದ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಮಾರ್ಗವಾಗಿ ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಕಡೆಗೆ ಸಂಚರಿಸುವ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ, ವಾಹನಗಳು ನ್ಯೂ ಚಿತ್ರಾ ಜಂಕ್ಷನ್‍ನಿಂದ ಕಂಡತ್‍ಪಳ್ಳಿ, ಮಂಡಿ, ಕುದ್ರೋಳಿ, ಬೊಕ್ಕಪಟ್ಟ, ಸುಲ್ತಾನ್‍ಬತ್ತೇರಿ ಮೂಲಕ ಉರ್ವಮಾರ್ಕೆಟ್ ಮಾರ್ಗವಾಗಿ ನಗರದಿಂದ ಹೊರ ಹೋಗುವುದು ಹಾಗೂ ನ್ಯೂ ಚಿತ್ರಾ ಜಂಕ್ಷನ್‍ನಿಂದ ಡೊಂಗರಕೇರಿ ವೆಂಕಟರಮಣ ದೇವಸ್ಥಾನ ಜಂಕ್ಷನ್, ರಾಷ್ಟ್ರ ಕವಿ ಎಂ. ಗೋವಿಂದ ಪೈ ವೃತ್ತ, ಪಿ.ವಿ.ಎಸ್ ಮಾರ್ಗವಾಗಿ ಮುಂದುವರೆದು ಬಂಟ್ಸ್ ಹಾಸ್ಟೆಲ್ ಕಡೆಗೆ ಸಂಚರಿಸುವುದು.

    ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಕಡೆಯಿಂದ ಕುದ್ರೋಳಿ ದೇವಸ್ಥಾನದ ಕಡೆಗೆ ಸಂಚರಿಸುವ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

    ಉರ್ವಾಸ್ಟೋರ್ ಕಡೆಯಿಂದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಕಡೆಗೆ ಬರುವ ವಾಹನಗಳು ಕೋಟೆಕಣಿ ರಸ್ತೆಯಾಗಿ ಕೊಟ್ಟಾರಕ್ರಾಸ್, ಕಾಪಿಕಾಡು, ಕೆ.ಎಸ್.ಆರ್.ಟಿ.ಸಿ, ಬಿಜೈ ಮಾರ್ಕೆಟ್ ಜಂಕ್ಷನ್ ಮೂಲಕ ಸಂಚರಿಸುವುದು.

    ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಕಡೆಯಿಂದ ಎಂ.ಜಿ. ರಸ್ತೆಗೆ (ಲಾಲ್‍ಬಾಗ್ ಜಂಕ್ಷನ್ ಕಡೆಗೆ) ಹಾಗೂ ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಯಿಂದ ಕೆ.ಎಸ್.ಆರ್.ಟಿ.ಸಿ ಕಡೆಗೆ ಬರುವ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಕುಂಟಿಕಾನ ಕಡೆಯಿಂದ ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಬಳಿ ಎಡಕ್ಕೆ ತಿರುಗಿ ಬಿಜೈ ಮಾರ್ಕೆಟ್ ಜಂಕ್ಷನ್ ಮೂಲಕ ಸಂಚರಿಸುವುದು. ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಯಿಂದ ಎಂ.ಜಿ ರಸ್ತೆಗೆ (ಲಾಲ್‍ಬಾಗ್ ಜಂಕ್ಷನ್ ಕಡೆಗೆ) ಬರುವ ವಾಹನಗಳು ಕೆ.ಎಸ್.ಆರ್.ಟಿ.ಸಿ. ಜಂಕ್ಷನ್ ಬಳಿ `ಯು’ ತಿರುವು ಪಡೆದುಕೊಂಡು ಬಿಜೈ ಮಾರ್ಕೆಟ್ ಜಂಕ್ಷನ್ ಕಡೆಗೆ ಸಂಚರಿಸುವುದು.

    ಪಶು ಆಸ್ಪತ್ರೆ ಜಂಕ್ಷನ್ (ಕಪುಚಿನ್ ಚರ್ಚ್)ನಿಂದ ಕೋರಿರೊಟ್ಟಿ ಜಂಕ್ಷನ್ (ಎಂ.ಜಿ.ರಸ್ತೆ) ಕಡೆಗೆ ಸಾಗುವ ಎಲ್ಲಾ ವಾಹನ ಸಂಚಾರ ನಿಷೇಧಿಸಲಾಗಿದೆ.

    ಕೆ.ಎಸ್.ಆರ್.ಟಿ.ಸಿ. ಬಸ್ಸು ನಿಲ್ದಾಣಕ್ಕೆ ಬಂದು ಹೋಗುವ ಎಲ್ಲಾ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಪೈಕಿ ಪಂಪ್‍ವೆಲ್ ಕಡೆಗೆ ಸಂಚರಿಸುವ ಬಸ್ಸುಗಳು ಕೆ.ಪಿ.ಟಿ ಜಂಕ್ಷನ್ ಮೂಲಕ ಮತ್ತು ಉಡುಪಿ ಕಡೆಗೆ ಸಂಚರಿಸುವ ಬಸ್ಸುಗಳು ಕುಂಟಿಕಾನ ಜಂಕ್ಷನ್ ಮೂಲಕ ಸಂಚರಿಸುವುದು.

    ಮೆರವಣಿಗೆ ಹಾದು ಹೋಗುವ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

    ಕುದ್ರೋಳಿ ನಾರಾಯಣಗುರು ಕಾಲೇಜು ಬಳಿಯಿಂದ ನವದುರ್ಗೆಯರ ಟ್ಯಾಬ್ಲೊಗಳು ತಯಾರಿಗೊಂಡು ದೇವಸ್ಥಾನಕ್ಕೆ ಬರಲಿರುವುದರಿಂದ ಕುದ್ರೋಳಿ ನಾರಾಯಣ ಗುರು ಕಾಲೇಜು ಜಂಕ್ಷನ್ ರಸ್ತೆಯಿಂದ ಬರ್ಕೆ ಜಂಕ್ಷನ್ ತನಕ ಮತ್ತು ಬರ್ಕೆ ಜಂಕ್ಷನ್‍ನಿಂದ ದುರ್ಗಾಮಹಲ್ ಜಂಕ್ಷನ್‍ವರೆಗೆ ಹಾಗೂ ದುರ್ಗಾಮಹಲ್ ಜಂಕ್ಷನ್‍ನಿಂದ ಅಳಕೆ ಬ್ರಿಡ್ಜ್ ತನಕ ರಸ್ತೆಯ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ.

    ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳುವ ಎಲ್ಲಾ ಟ್ಯಾಬ್ಲೊಗಳು ಉರ್ವ ಮಾರ್ಕೆಟ್ ಜಂಕ್ಷನ್‍ನಿಂದ, ಗಾಂಧಿನಗರದಿಂದಾಗಿ ಮಣ್ಣಗುಡ್ಡ ಗುರ್ಜಿ ಜಂಕ್ಷನ್‍ನಲ್ಲಿ ಸರದಿ ಸಾಲಿನಲ್ಲಿ ಬಂದು ನಿಂತು ಅಲ್ಲಿಂದ ಸದರಿ ಟ್ಯಾಬ್ಲೊಗಳು ಮೆರವಣಿಗೆಯಲ್ಲಿ ಮುಂದುವರೆಯುದರಿಂದ ಮಣ್ಣಗುಡ್ಡ ಗುರ್ಜಿ ಜಂಕ್ಷನ್‍ನಿಂದ ಉರ್ವ ಮಾರ್ಕೆಟ್ ಜಂಕ್ಷನ್‍ವರೆಗಿನ ರಸ್ತೆಯ ಇಕ್ಕೆಲಗಳಲ್ಲಿ ಹಾಗೂ ಮಣ್ಣಗುಡ್ಡ ಗಾಂಧಿನಗರ ಪಾರ್ಕ್ ಮುಂಭಾಗದ ರಸ್ತೆ ಮತ್ತು ಗಾಂಧಿನಗರ 1ರಿಂದ 8ರವರೆಗಿನ ಅಡ್ಡ ರಸ್ತೆಗಳ ಇಕ್ಕೆಲಗಳಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Latest Posts

    ಮಂಗಳೂರು: ವಿಮಾನ ನಿಲ್ದಾಣದಲ್ಲಿ 1.69 ಕೋಟಿ ಮೌಲ್ಯದ ವಜ್ರ ವಶಕ್ಕೆ

    ಮಂಗಳೂರು : ಅಕ್ರಮ ಚಿನ್ನ ಸಾಗಾಟ ಹೆಚ್ಚಾಗಿ ನಡೆಯುತ್ತಿದ್ದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಕೋಟ್ಯಾಂತರ ಮೌಲ್ಯದ ವಜ್ರವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಘಟನೆ ನಡೆದಿದ್ದು, ಪ್ರಯಾಣಿಕನೊಬ್ಬನಿಂದ 1.69...

    ಮಣ್ಣಿನ ಪಾತ್ರೆಯಲ್ಲಿ ‘ಮೊಸರು’ ಸಂಗ್ರಹಿಸೋದು ಎಷ್ಟೆಲ್ಲಾ ಪ್ರಯೋಜನಕಾರಿ ಗೊತ್ತಾ.?

    ಮೊಸರು ತಿನ್ನದೆ ಊಟ ಪೂರ್ಣವಾಗುವುದಿಲ್ಲ. ಅದಕ್ಕಾಗಿಯೇ ಬಹುತೇಕ ಎಲ್ಲಾ ಮನೆಗಳಲ್ಲಿ ಮೊಸರು ಇರಬೇಕು. ಅಲ್ಲದೆ, ಮೊಸರು ಅನೇಕ ಆರೋಗ್ಯ ಪ್ರಯೋಜನಗಳನ್ನ ಹೊಂದಿದ್ದು, ರುಚಿಯೂ ಅದ್ಭುತವಾಗಿರುತ್ತೆ. ಬೇಸಿಗೆಯಲ್ಲಿ ಮೊಸರು ಆರೋಗ್ಯಕ್ಕೆ ಬಹಳ...

    ಕುಂದಾಪುರ: ಏಳನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು

    ಕುಂದಾಪುರ: ಬಿಲ್ಲಾಡಿ ಗ್ರಾಮದ ಬನ್ನೇರಳಕಟ್ಟೆ ಎಂಬಲ್ಲಿ ಏಳನೇ ತರಗತಿ ವಿದ್ಯಾರ್ಥಿನಿಯೊಬ್ಬಳು ದಾರುಣವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೇ 26ರಂದು ನಡೆದಿದೆ. ಬನ್ನೇರಳಕಟ್ಟೆ ನಿವಾಸಿ ಕೃಷ್ಣ ಎಂಬವರ ಪುತ್ರಿ ಹದಿಮೂರು ವರ್ಷದ ಪ್ರಿಯಾ...

    ನೂತನ ಸಂಸತ್ ಭವನದ ಉದ್ಘಾಟನೆ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಭಾರತ – ಗಮನ ಸೆಳೆದ ಸರ್ವಧರ್ಮೀಯರ ಸಮ್ಮಿಲನ

    ನವದೆಹಲಿ : ನೂತನ ಸಂಸತ್ ಭವನ ಉದ್ಘಾಟನಾ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ನಾಮಫಲಕವನ್ನು ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಸರ್ವಧರ್ಮೀಯರ ಸಮ್ಮಿಲನವು ವಿಶೇಷವಾಗಿ ಗಮನ ಸೆಳೆಯಿತು. ಹೌದು, ನೂತನ ಸಂಸತ್ ಭವನ ಉದ್ಘಾಟನಾ...

    Don't Miss

    ಉಪ್ಪಿನಂಗಡಿ: ಕುಮಾರಧಾರ ನದಿಯ ಬಳಿ ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿ ಸಾವು..!

    ಉಪ್ಪಿನಂಗಡಿ: ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಅಡಕ್ಕಲ್ ಕುಮಾರಧಾರ ನದಿಯ ಬಳಿ ನಡೆದಿದೆ. ಶರೀಪುದ್ದೀನ್(19) ಮೃತ ಯುವಕನಾಗಿದ್ದಾನೆ....

    ವಿಧಾನಸಭೆ ಸಭಾಧ್ಯಕ್ಷ ಸ್ಥಾನಕ್ಕೆ ಯು.ಟಿ ಖಾದರ್ ನಾಮಪತ್ರ ಸಲ್ಲಿಕೆ

    ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ವಿಧಾನಸಭೆಯ ಸ್ಪೀಕರ್ ಚುನಾವಣೆಗಾಗಿ ( Karnataka Assembly Speaker Election ) ಇಂದು ಶಾಸಕ ಯು.ಟಿ ಖಾದರ್ ( MLA UT Khadar )...

    ಉಳ್ಳಾಲ ಠಾಣೆಯ ಕಾನ್ಸ್ ಟೇಬಲ್ ವಾಸುದೇವ ಚೌಹಾಣ್ ಅಮಾನತು

    ಉಳ್ಳಾಲ: ಉಳ್ಳಾಲ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು ಮಾಡಿದ್ದಾರೆ. ಇತ್ತೀಚೆಗೆ ತಲಪಾಡಿ...

    ಸುಳ್ಯ : ಬೈಕ್ ಅಪಘಾತ, ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯು

    ಸುಳ್ಯ ಸಮೀಪದ ಕಲ್ಚರ್ಪೆ – ಪಾಲಡ್ಕ ಬಳಿ ಬೈಕ್ ಅಪಘಾತ ಸಂಭವಿಸಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟು ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ...

    ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಅಚ್ಚರಿಯ ಆಯ್ಕೆಯಾದ ಮಾಜಿ ಸಚಿವ ಯು.ಟಿ ಖಾದರ್

    ಬೆಂಗಳೂರು: ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಹುದ್ದೆಗೆ ಅಚ್ಚರಿಯ ಆಯ್ಕೆಯಾಗಿ ಮಾಜಿ ಸಚಿವ ಯು ಟಿ ಖಾದರ್ ಅವರನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ ಎಂದು ತಿಳಿದು ಬಂದಿದೆ.