Friday, March 29, 2024
spot_img
More

    Latest Posts

    ಮಂಜೇಶ್ವರದಲ್ಲಿ ಯುವಕನ ಅಪಹರಣ – ಇಬ್ಬರ ಬಂಧನ!

    ಕಾಸರಗೋಡು : ಕಾರಿನಲ್ಲಿ ಬಂದ ತಂಡವೊಂದು ಯುವಕನನ್ನು ಅಪಹರಿಸಿದ ಘಟನೆ ಸೆ.10ರ ಶುಕ್ರವಾರ ರಾತ್ರಿ ಮಜೀರ್ಪಳ್ಳದಲ್ಲಿ ನಡೆದಿದ್ದು, ಇಬ್ಬರನ್ನು ನಾಗರಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.

    ಹಣದ ವ್ಯವಹಾರ ಕೃತ್ಯಕ್ಕೆ ಕಾರಣ ಎನ್ನಲಾಗಿದೆ. ರಾತ್ರಿ ಕಾರಿನಲ್ಲಿ ಬಂದ ತಂಡವು ಮಜೀರ್ಪಳ್ಳ ಬಲಿಪಗುಳಿಯ ಸವಾದ್ (28) ಎಂಬ ಯುವಕನನ್ನು ಬಲವಂತವಾಗಿ ಅಪಹರಿಸಿ ಪರಾರಿಯಾಗಿದ್ದು, ಈ ಕಾರಿಗೆ ಬೆಂಗಾವಲಾಗಿ ಬಂದ ಇನ್ನೊಂದು, ಕಾರು ಮತ್ತು ಬೈಕ್ ಅನ್ನು ನಾಗರಿಕರು ತಡೆದು ಇಬ್ಬರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

    ಕಂಕನಾಡಿಯ ಅಬ್ದುಲ್ ಹಸೀಬ್ (28) ಹಾಗೂ ಬಂಟ್ವಾಳದ ಯಾಹ್ಯಾ (32) ಪೋಲೀಸರ ವಶದಲ್ಲಿದ್ದು, ನಾಲ್ವರು ಪರಾರಿಯಾಗಿದ್ದಾರೆ. ಹಣಕಾಸಿನ ವ್ಯವಹಾರಕ್ಕೆ ಸಂಬಂಧಪಟ್ಟಂತೆ ತಂಡವು ಸವಾದ್ ಅನ್ನು ಅಪಹರಿಸಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ.ಗಲ್ಫ್ ಉದ್ಯೋಗಿಯಾಗಿರುವ ಸವಾದ್ ತಿಂಗಳುಗಳ ಹಿಂದೆ ಊರಿಗೆ ಬಂದಿದ್ದರು. ಗಲ್ಫ್‌‌‌ನಲ್ಲಿದ್ದಾಗ ಬೆಂಗಳೂರು ಮೂಲದ ತಂಡವೊಂದರ ಜೊತೆ ಸವಾದ್ ಹಣದ ವ್ಯವಹಾರ ಮಾಡಿಕೊಂಡಿದ್ದು, ಈ ವಿಚಾರಕ್ಕಾಗಿ ಅಪಹರಣ ನಡೆದಿದೆ ಎನ್ನಲಾಗಿದೆ.ಸವಾದ್ ತಾಯಿ ಸೈನಬಾ ನೀಡಿದ ದೂರಿನಂತೆ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

    spot_img
    spot_img

    Latest Posts

    spot_imgspot_img
    spot_imgspot_img
    spot_img

    Don't Miss