ನವದೆಹಲಿ: ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ (92) ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.
ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು.
ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರು
ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು (2004 ಮತ್ತು 2014) ಸೇವೆ ಸಲ್ಲಿಸಿದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು. ಗಾಂಧಿ ಕುಟುಂಬ ಹೊರತು ಪಡಿಸಿ ಕಾಂಗ್ರೆಸ್ನಲ್ಲಿ ಹೆಚ್ಚು ಅವಧಿಯ ಪ್ರಧಾನಿ ಆಗಿದ್ದ ಹೆಗ್ಗಳಿಕೆ ಇವರದ್ದು.
Trending
- ಗುರು ಪೌರ್ಣಮಿ
- ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಉಡುಪಿ ಜಿಲ್ಲಾ ಘಟಕ ವತಿಯಿಂದ ಕುಂದಾಪುರದ ತ್ರಾಸಿಯಲ್ಲಿ ನಡೆದ ಪತ್ರಿಕಾ ದಿನಾಚಾರಣೆಯ ಕಾರ್ಯಕ್ರಮದಲ್ಲಿ ಕುಂದಾಪುರದ ಹೆಮ್ಮೆಯ ಅಂತಾರಾಷ್ಟ್ರೀಯ ಪವರ್ ಲಿಫ್ಟರ ಶ್ರೀ ಸತೀಶ್ ಖಾರ್ವಿ ಅವರಿಗೆ ಸನ್ಮಾನ
- ದಕ್ಷಿಣ ಕನ್ನಡ ಜಿಲ್ಲೆ ಯಲ್ಲಿ ಶಾಂತಿ ಸೌಹಾರ್ದ ನೆಲೆಸಲು ಪ್ರಯತ್ನಿಸುತ್ತಿರುವ ಗ್ರಹ ಮಂತ್ರಿಯವರಿಗೆ ತುಳುನಾಡ ರಕ್ಷಣಾ ವೇದಿಕೆ ಸುಳ್ಯ ಅಧ್ಯಕ್ಷ ಪ್ರಶಾಂತ್ ರೈ ಮರವಂಜ ರಿಂದ ಸನ್ಮಾನಿಸಿದರು.
- ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಜಿಲ್ಲೆ ಎಂದು ಮರು ನಾಮಕರಣ ಮಾಡಲು ಒತ್ತಾಯ
- ಮಂಗಳೂರು : ಸಿದ್ದಿಕ್ ಪಾಂಡವರ ಕಲ್ಲು ಮದುವೆ ಮಾಡಿಸುವ ನೆಪದಲ್ಲಿ ಹಣ ಸಂಗ್ರಹ ಮಾಡುವುದಲ್ಲದೆ, ಮೊಬೈಲ್ ನಂಬರ್ ಪಡೆದು ಆನೈತಿಕ ಸಂಬಂಧಕ್ಕೆ ಬಳಕೆ : ಅಬ್ದುಲ್ ರವೂಫ್ ಗಂಭೀರ ಆರೋಪ…!
- ಸೌಹಾರ್ದ ಬದುಕು ಕಟ್ಟೋಣ: ಡಾ.ಎನ್.ಡಾ.ಎನ್.ಇಸ್ಮಾಯಿಲ್, ಅಕಾಡೆಮಿಯ ನಾಟಕ ಪ್ರದರ್ಶನ ಉದ್ಘಾಟನೆ
- ಪ್ರೀತಿಸುತ್ತಿದ್ದ ಯುವತಿಗೆ ಚೂರಿ ಇರಿದು ಬಳಿಕ ಯುವಕ ಆತ್ಮಹತ್ಯೆ…!!
- ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪ ಪರಿಹಾರವೇ ಬಂದಿಲ್ಲ:- ಶಾಸಕ ಕಾಮತ್