ನವದೆಹಲಿ: ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ (92) ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.
ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು.
ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರು
ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು (2004 ಮತ್ತು 2014) ಸೇವೆ ಸಲ್ಲಿಸಿದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು. ಗಾಂಧಿ ಕುಟುಂಬ ಹೊರತು ಪಡಿಸಿ ಕಾಂಗ್ರೆಸ್ನಲ್ಲಿ ಹೆಚ್ಚು ಅವಧಿಯ ಪ್ರಧಾನಿ ಆಗಿದ್ದ ಹೆಗ್ಗಳಿಕೆ ಇವರದ್ದು.
Trending
- ಅಮ್ಮುಂಜೆ ಸೆೇಕ್ರೆಡ್ ಹಾರ್ಟ್ ಹಿರಿಯ ಪ್ರಾಥಮಿಕ ಶಾಲೆ ಉಳಿಸಲು ತುಳುನಾಡ ರಕ್ಷಣಾ ವೇದಿಕೆಯ ಆಗ್ರಹ
- ಸೂಡ ಮೇಳದ ದಶಮ ಸಂಭ್ರಮ – ಯಕ್ಷಗಾನ ಸಪ್ತಾಹ
- ಭೀಕರ ಅಗ್ನಿ ದುರಂತದಲ್ಲಿ 23 ಮಂದಿ ಸಜೀವ ದಹನ
- ಚಿಕ್ಕಮಗಳೂರು : ದತ್ತ ಜಯಂತಿ ಬ್ಯಾನರ್ ಉದ್ವಿಗ್ನತೆ – ಕಡೂರಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ಸಿನ ಕಾರ್ಯಕರ್ತ ಕೊಲೆ
- ಹಾವಂಜೆ ಗ್ರಾಮದ ತ್ರಿವರ್ಣ ವಿಶ್ವವೇದಿಕೆ (ರಿ.), ಕೀಳಂಜೆ ಇದರ 12ನೇ ವಾರ್ಷಿಕೋತ್ಸವ ಸಮಾರಂಭ
- ಜಗದ್ಗುರು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ – ಐದು ದಿನಗಳ ಬಿಹಾರ್–ಜಾರ್ಖಂಡ್ ತೀರ್ಥಯಾತ್ರೆ
- ಡಿಸೆಂಬರ್ 5 ರಂದು ಬೆಳಿಗ್ಗೆ 8.55ಕ್ಕೆ ಶಿಲಾನ್ಯಾಸ ಕಾರ್ಯಕ್ರಮ
- ಯಕ್ಷಗಾನ ತಾಳಮದ್ದಳೆ ಸಪ್ತಾಹ ಸಮಾರೋಪ – ಯಕ್ಷಾಂಗಣ ಪ್ರಶಸ್ತಿ ಪ್ರದಾನ

