ನವದೆಹಲಿ: ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ (92) ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.
ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು.
ತೀವ್ರ ಉಸಿರಾಟದ ಸಮಸ್ಯೆಯಿಂದಾಗಿ ಕಾರಣ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ಕೊನೆಯುಸಿರೆಳೆದಿದ್ದಾರೆ.
ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ಪ್ರಾಮುಖ್ಯತೆಯನ್ನು ಗಳಿಸಿದರು. ಆರ್ಥಿಕತೆಯನ್ನು ಪರಿವರ್ತಿಸುವ ವ್ಯಾಪಕ ಸುಧಾರಣೆಗಳನ್ನು ತಂದರು
ಯುಪಿಎಯ ಎರಡು ಅವಧಿಯ ಪ್ರಧಾನಿಯಾಗಿ ಅವರು (2004 ಮತ್ತು 2014) ಸೇವೆ ಸಲ್ಲಿಸಿದರು. ಈ ವರ್ಷದ (2024) ಆರಂಭದ ವರೆಗೆ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಏಪ್ರಿಲ್ನಲ್ಲಿ ರಾಜ್ಯಸಭೆಯಿಂದ ನಿವೃತ್ತರಾದರು. ಗಾಂಧಿ ಕುಟುಂಬ ಹೊರತು ಪಡಿಸಿ ಕಾಂಗ್ರೆಸ್ನಲ್ಲಿ ಹೆಚ್ಚು ಅವಧಿಯ ಪ್ರಧಾನಿ ಆಗಿದ್ದ ಹೆಗ್ಗಳಿಕೆ ಇವರದ್ದು.
Trending
- ಪಚ್ಚನಾಡಿಯಲ್ಲಿ ಹೊಸತಾಗಿ ಕಸ ಸಂಗ್ರಹ ಕ್ಕೆ ಅನುಮತಿ. ವಾರ್ಡ್ ಕಾಂಗ್ರೆಸ್ ತೀವ್ರ ವಿರೋಧ.
- ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ- ಉದ್ಯಮಿ ರಾಕೀ ಬಂಧನ
- ಮಂಗಳೂರು : ಸ್ಪೀಕರ್ ಯು.ಟಿ ಖಾದರ್ ರವರಿಂದ ನೀರುಮಾರ್ಗ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ…!
- ಎಂ.ಆರ್. ಪಿ.ಎಲ್ ನಲ್ಲಿ ವಿಷಾನಿಲ ಸೋರಿಕೆ: ಇಬ್ಬರು ಸಿಬ್ಬಂದಿಗಳು ಸಾವು, ಓರ್ವ ಗಂಭೀರ
- ಲೋಕಅದಾಲತ್ ನಲ್ಲಿ ಗಂಡ ಹೆಂಡತಿಯ ಒಂದಾಗಿಸಿದ ಪ್ರಧಾನ ಕೌಟುಂಬಿಕ ನ್ಯಾಯಾಲಯ
- ಕರಾವಳಿ ಟೀಮ್ ನ ಅಧ್ಯಕ್ಷರಾದ ನಿಸಾರ್ ಕರಾವಳಿ ಆಜ್ಮಲ್ ಕೊಳಂಬೆ ಹಫೀಜ್ ಕೊಳಂಬೆರವರ ಸಮಾಜಮುಖಿ ಕಾರ್ಯಕ್ರಮ
- ವೆನ್ಲಾಕ್, ಲೇಡಿಗೋಶನ್ ಹಾಗು ಕೆಎಂಸಿ ಹಳೆ ವಿದ್ಯಾರ್ಥಿ ಸಂಘ ಹಾಗು ವೆನ್ಲಾಕ್ ಲೇಡಿ ಗೋಶನ್ ಆಸ್ಪತ್ರೆಗಳ 175 ನೇ ವರ್ಷದ ಆಚರಣಾ ಸಮಿತಿಯ ವತಿಯಿಂದ ಐತಿಹಾಸಿಕ ವೈದ್ಯರ ದಿನಾಚರಣೆ
- ಕೋಟ್ಯಂತರ ರೂ. ಪಡೆದು ವಂಚಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ವಿರುದ್ಧ ಕೆ-ಕೋಕಾ (ಕರ್ನಾಟಕ ಕಂಟ್ರೋಲ್ ಆಫ್ ಆರ್ಗನೈಸ್ಡ್ ಆ್ಯಕ್ಟ್) ಕಾಯ್ದೆಯಡಿ ಪ್ರಕರಣ: ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ