ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ರೆಸಾರ್ಟ್, ಹೊಟೇಲ್ ಹಾಗೂ ಕಲ್ಯಾಣ ಮಂಟಪಗಳಲ್ಲಿ ಮದುವೆ ಸಮಾರಂಭಗಳಿಗೆ ಸರ್ಕಾರ ಅವಕಾಶ ನೀಡಿದೆ.
ಅನುಮತಿ ನೀಡಿದರೂ ಕೆಲವು ಷರತ್ತುಗಳನ್ನು ವಿಧಿಸಿದೆ. ಬಿಬಿಎಂಪಿ ವ್ಯಾಪ್ತಿಯ ಕಲ್ಯಾಣ ಮಂಟಪಗಳಲ್ಲಿ ಮದುವೆ ಮಾಡುವವರು ಕಡ್ಡಾಯವಾಗಿ ಪಾಲಿಕೆ ಜಂಟಿ ಆಯುಕ್ತರ ಅನುಮತಿ ಪಡೆದುಕೊಳ್ಳಬೇಕು.
ಅನುಮತಿ ಪಡೆದು ಕಲ್ಯಾಣ ಮಂಟಪಗಳಲ್ಲಿ ಮದುವೆ ಮಾಡುವಾಗ ಕೊರೊನಾ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಲೇಬೇಕು. ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಗರಿಷ್ಠ 40 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಮದುವೆ ಸಮಾರಂಭ ನಡೆಯವ ಸ್ಥಳಗಳಲ್ಲಿ ಪಾಲಿಕೆ ತನ್ನ ಮಾರ್ಷಲ್ ಗಳನ್ನು ನಿಯೋಜನೆ ಮಾಡಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದಲ್ಲಿ ಮಾರ್ಷಲ್ ಗಳು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಿದ್ದಾರೆ.